July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಮತ್ತು ಬೆಳ್ತಂಗಡಿ ತಾಲೂಕಿನ ಎರಡನೇ ಮಸೀದಿ ಎಂದು ಖ್ಯಾತಿ ಪಡೆದ ಕಿಲ್ಲೂರು ಮುಹಿಯದ್ದೀನ್ ಜುಮಾ ಮಸ್ಜಿದ್‌ನ ನವೀಕರಣಕ್ಕೆ ಶಿಲಾನ್ಯಾಸ ಹಾಗೂ ತಾತ್ಕಾಲಿಕ ಮಸ್ಜಿದ್ ಸ್ಥಳಾಂತರ ಮತ್ತು ವಕ್ಫ್ ನಿರ್ವಹಣಾ ಕಾರ್ಯಕ್ರಮ ಜು. 5 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಯುಕ್ತ ಜಮಾಅತ್ ಖಾಝಿ ಖುರ್ರತುಸ್ಸಾದತ್ ಕೂರ ತಂಙಳ್ ಅವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ ಕಿಲ್ಲೂರು ವಹಿಸಿದ್ದರು.
ಜಮಾಅತ್ ಧರ್ಮ ಗುರುಗಳಾದ ಪಿ.ಬಿ ಶಂಶೀರ್ ಸಖಾಫಿ ಕಾರ್ಯಕ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಸಲಹಾ ಸಮಿತಿ ಸದಸ್ಯ ಕಾಜೂರು ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಖ್ ಕಾಜೂರು, ಕಿಲ್ಲೂರು ಮಸ್ಜಿದ್ ಆಡಳಿತಾಧಿಕಾರಿ ಹಾಗೂ ಮಾಜಿ ಸೈನಿಕ ಮುಹಮ್ಮದ್ ರಫೀ ಬೆಳ್ತಂಗಡಿ, ಜಮಾಅತ್ ಉಪಾದ್ಯಕ್ಷ ಹಮೀದ್ ಅಮ್ಮಿ, ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆಮನೆ, ಜೊತೆ ಕಾರ್ಯದರ್ಶಿ ಹಂಝತ್, ಸದಸ್ಯರಾದ ಮುಹಮ್ಮದ್ ಪುತ್ತುಮೋನು, ಹನೀಫ್ ಹೆಚ್.ಎನ್, ಬದ್ರುದ್ದೀನ್ ಕಿಲ್ಲೂರು, ಮುಹಮ್ಮದ್ ಮಣ್ಣಗುಂಡಿ , ಅಶ್ರಫ್ ಶ್ರವಣಗುಂಡ, ಹನೀಫ್ ಮಲ್ಲಿಗೆಮನೆ , ಎಸ್.ಜೆ.ಎಮ್ ಮುರ ರೇಂಜ್ ಅಧ್ಯಕ್ಷ ಸಿರಾಜುದ್ದೀನ್ ಸಖಾಫಿ ಪಿಚಲಾರ್ ಹಾಗೂ ಸ್ಥಳೀಯ ಮಸ್ಜಿದ್‌ಗಳಾದ ಇಂದಬೆಟ್ಟು , ಪಿಚಲಾರ್ , ಎರ್ಮಾಳ, ಬೆದ್ರಬೆಟ್ಟು, ಪೆರ್ದಾಡಿ ತಾಜುಲ್ ಉಲಮಾ ಮಸ್ಜಿದ್, ಅಜ್ಮೀರ್ ಜುಮ್ಮಾ ಮಸ್ಜಿದ್ ಪೆರ್ದಾಡಿಯ ಇಲ್ಲಿನ ಆಡಳಿತ ಸಮಿತಿ ಅದ್ಯಕ್ಷರುಗಳು , ಪದಾಧಿಕಾರಿಗಳು, ಸಮಿತಿ ಸದಸ್ಯರು, ಧರ್ಮ ಗುರುಗಳು ಹಾಗೂ ಜಮಾಅತರು ಉಪಸ್ಥಿತರಿದ್ದರು.

ಡಿ.ಕೆ ಅಬ್ದುರಶೀದ್ ಮದನಿ ಸ್ವಾಗತಿಸಿ ಧನ್ಯವಾದಗೈದರು.

Related posts

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya
error: Content is protected !!