37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜುಲೈ 5 ರಂದು ನಡೆಯಿತು.


ಉದ್ಘಾಟನೆಯನ್ನು ನೆರವೇರಿಸಿದ ಶ್ರೀ.ಧ.ಮ.ಕಾಲೇಜಿನ ಪ್ರಾಧ್ಯಾಪಕರಾದ ಗಣೇಶ ವಿ ಶೆಂಡ್ಯೆಯವರು ಮಾತನಾಡಿ, ‘ಎನ್ ಎಸ್ ಎಸ್ ಸ್ವಯಂಸೇವಕರು ತಾವು ಮಾಡುವ ಪ್ರತಿಯೊಂದು ಕೆಲಸವನ್ನು ಮನಸ್ಸಿನಿಂದ ಮಾಡಬೇಕು. ಪರಿಸರ ಪ್ರಜ್ಞೆ ಬೆಳೆಸಿಕೊಂಡು, ಪ್ರಚಲಿತ ವಿದ್ಯಮಾನಗಳ ಬಗ್ಗೆ ಜಾಗೃತಿ ಹೊಂದಿರಬೇಕು ‘ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ವಿನಯಚಂದ್ರ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಕಾರ್ಯಕ್ರಮಾಧಿಕಾರಿ ಶ್ರೀ ಸಂದೀಪ್ ಐ ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಸ್ವಾಗತಿಸಿದರು. ಸ್ವಯಂಸೇವಕ ಲತೇಶ್ ನಿರೂಪಿಸಿ, ಸ್ವಯಂಸೇವಕಿ ಕುಮಾರಿ ಛಾಯಾ ಧನ್ಯವಾದವಿತ್ತರು.

Related posts

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
error: Content is protected !!