37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!