25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya
error: Content is protected !!