23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!