25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya
error: Content is protected !!