September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!