July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ ಮರ-ಬಳ್ಳಿ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದಿದೆ. ಅದಲ್ಲದೇ ರಸ್ತೆಯ ತೋಡಿಗೂ ಅಡ್ಡಲಾಗಿ ಇರುವುದರಿಂದ ಪ್ರವಾಹದ ಭೀತಿ ಎದುರಾಗಿದೆ.

ಸಂಬಂಧಪಟ್ಟವರಿಗೆ ಪರಿಸ್ಥಿತಿಯ ಚಿತ್ರಣ ಸಮೇತ ತಿಳಿಸಲಾಗಿದ್ದು, ಬರಿ ಸೂಚನಾ ಫಲಕಕ್ಕೆ ಸೀಮಿತವಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿದ್ದು. ಶಾಲಾ ಮಕ್ಕಳಿಗೆ, ಕೆಲಸ ಕಾರ್ಯಗಳಿಗೆ ಹೋಗಲು ಭಾರಿ ಕಷ್ಟವಾಗಿದೆ. ಅಷ್ಟಕ್ಕೂ ಗ್ರಾಮಸ್ಥರೇ ತೆರವು ಮಾಡಲು ಅಸಾಧ್ಯವಾಗಿದ್ದು, ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಮಾಡಿಸಿ ಕೊಡಿ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ

Related posts

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya
error: Content is protected !!