April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ, ಉಂತನಾಜೆ
ಕಣಿಯೂರು ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿ ನೆಟ್ ವರ್ಕ್ ಸಿಗದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರಕ್ಕೆ ಶಾಲೆಗಳಲ್ಲಿ, ಯಾವುದೇ ಸಂದರ್ಭದಲ್ಲಿ ಸರಿಯಾಗಿ ನೆಟ್ ವರ್ಕ್ ಸಿಗದೆ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ.

ಟವರ್ ಇರುವ ಜಾಗದಿಂದ 1 ಕಿ.ಮೀ ದೂರಕ್ಕೆ ನೆಟ್ವರ್ಕ್ ಸಿಗುವುದಿಲ್ಲ ಸ್ವತಃ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಮನವರಿಕೆ ಮಾಡಿ ಕೊಟ್ಟರೂ ಏನೂ ಪ್ರಯೋಜನವಿಲ್ಲ. ಈ ಒಂದು ಟವರಿನ ಕಾರ್ಯರೂಪ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುವ ಹಾಗೆ ಮಾಡಿಕೊಡಬೇಕಾಗಿ ಸ್ಥಳೀಯ ನಿವಾಸಿ ಮುಹಮ್ಮದ್ ರವರು ತಿಳಿಸಿದ್ದಾರೆ.

ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆ ಸರಿ ಮಾಡದೇ ಇದ್ದಲ್ಲಿ ಪ್ರತಿಭಟನೆ ಮಾಡುವ ಬಗ್ಗೆ ಸ್ಥಳೀಯರು ತೀರ್ಮಾನಿಸಿದ್ದಾರೆ.


Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!