37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ, ಉಂತನಾಜೆ
ಕಣಿಯೂರು ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿ ನೆಟ್ ವರ್ಕ್ ಸಿಗದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರಕ್ಕೆ ಶಾಲೆಗಳಲ್ಲಿ, ಯಾವುದೇ ಸಂದರ್ಭದಲ್ಲಿ ಸರಿಯಾಗಿ ನೆಟ್ ವರ್ಕ್ ಸಿಗದೆ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ.

ಟವರ್ ಇರುವ ಜಾಗದಿಂದ 1 ಕಿ.ಮೀ ದೂರಕ್ಕೆ ನೆಟ್ವರ್ಕ್ ಸಿಗುವುದಿಲ್ಲ ಸ್ವತಃ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಮನವರಿಕೆ ಮಾಡಿ ಕೊಟ್ಟರೂ ಏನೂ ಪ್ರಯೋಜನವಿಲ್ಲ. ಈ ಒಂದು ಟವರಿನ ಕಾರ್ಯರೂಪ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುವ ಹಾಗೆ ಮಾಡಿಕೊಡಬೇಕಾಗಿ ಸ್ಥಳೀಯ ನಿವಾಸಿ ಮುಹಮ್ಮದ್ ರವರು ತಿಳಿಸಿದ್ದಾರೆ.

ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆ ಸರಿ ಮಾಡದೇ ಇದ್ದಲ್ಲಿ ಪ್ರತಿಭಟನೆ ಮಾಡುವ ಬಗ್ಗೆ ಸ್ಥಳೀಯರು ತೀರ್ಮಾನಿಸಿದ್ದಾರೆ.


Related posts

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya
error: Content is protected !!