30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ, ಉಂತನಾಜೆ
ಕಣಿಯೂರು ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿ ನೆಟ್ ವರ್ಕ್ ಸಿಗದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರಕ್ಕೆ ಶಾಲೆಗಳಲ್ಲಿ, ಯಾವುದೇ ಸಂದರ್ಭದಲ್ಲಿ ಸರಿಯಾಗಿ ನೆಟ್ ವರ್ಕ್ ಸಿಗದೆ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ.

ಟವರ್ ಇರುವ ಜಾಗದಿಂದ 1 ಕಿ.ಮೀ ದೂರಕ್ಕೆ ನೆಟ್ವರ್ಕ್ ಸಿಗುವುದಿಲ್ಲ ಸ್ವತಃ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಮನವರಿಕೆ ಮಾಡಿ ಕೊಟ್ಟರೂ ಏನೂ ಪ್ರಯೋಜನವಿಲ್ಲ. ಈ ಒಂದು ಟವರಿನ ಕಾರ್ಯರೂಪ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುವ ಹಾಗೆ ಮಾಡಿಕೊಡಬೇಕಾಗಿ ಸ್ಥಳೀಯ ನಿವಾಸಿ ಮುಹಮ್ಮದ್ ರವರು ತಿಳಿಸಿದ್ದಾರೆ.

ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆ ಸರಿ ಮಾಡದೇ ಇದ್ದಲ್ಲಿ ಪ್ರತಿಭಟನೆ ಮಾಡುವ ಬಗ್ಗೆ ಸ್ಥಳೀಯರು ತೀರ್ಮಾನಿಸಿದ್ದಾರೆ.


Related posts

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!