23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ, ಉಂತನಾಜೆ
ಕಣಿಯೂರು ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿ ನೆಟ್ ವರ್ಕ್ ಸಿಗದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರಕ್ಕೆ ಶಾಲೆಗಳಲ್ಲಿ, ಯಾವುದೇ ಸಂದರ್ಭದಲ್ಲಿ ಸರಿಯಾಗಿ ನೆಟ್ ವರ್ಕ್ ಸಿಗದೆ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ.

ಟವರ್ ಇರುವ ಜಾಗದಿಂದ 1 ಕಿ.ಮೀ ದೂರಕ್ಕೆ ನೆಟ್ವರ್ಕ್ ಸಿಗುವುದಿಲ್ಲ ಸ್ವತಃ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಮನವರಿಕೆ ಮಾಡಿ ಕೊಟ್ಟರೂ ಏನೂ ಪ್ರಯೋಜನವಿಲ್ಲ. ಈ ಒಂದು ಟವರಿನ ಕಾರ್ಯರೂಪ ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಬರುವ ಹಾಗೆ ಮಾಡಿಕೊಡಬೇಕಾಗಿ ಸ್ಥಳೀಯ ನಿವಾಸಿ ಮುಹಮ್ಮದ್ ರವರು ತಿಳಿಸಿದ್ದಾರೆ.

ಆದಷ್ಟು ಬೇಗ ನೆಟ್ವರ್ಕ್ ಸಮಸ್ಯೆ ಸರಿ ಮಾಡದೇ ಇದ್ದಲ್ಲಿ ಪ್ರತಿಭಟನೆ ಮಾಡುವ ಬಗ್ಗೆ ಸ್ಥಳೀಯರು ತೀರ್ಮಾನಿಸಿದ್ದಾರೆ.


Related posts

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya
error: Content is protected !!