22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಶ್ರೀಮತಿ ಮೋಹಿನಿ ಮತ್ತು ಡಾಕಯ್ಯ ಗೌಡ ದಂಪತಿ ಸಮೇತವಾಗಿ ಗೇರುಕಟ್ಟೆ ಸಹಕಾರಿ ಭವನದಲ್ಲಿ ಜು.6 ರಂದು ನಡೆಯಿತು.


ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆ ವಹಿಸಿದ್ದರು.
ಅಂಚೆ ಇಲಾಖೆ ಪುತ್ತೂರು ವಿಭಾಗದ ಉಪ ಅಧಿಕ್ಷಕರಾದ ಮೋಹನ್,ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಕಳಿಯ ಸಿ.ಎ.ಬ್ಯಾಂಕ್ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕವಿತಾ ಶೆಟ್ಟಿ, ಅಂಚೆ ಇಲಾಖೆ ನಿವೃತ್ತ ಕೂಸಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.


ಗೇರುಕಟ್ಟೆ ವಿವಿಧ ಸಂಘದ ವತಿಯಿಂದ ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಸ್ಥಳೀಯ ಯುವಕರ ತಂಡ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಗುರುವಾಯನಕೆರೆ ಅಂಚೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗೇರುಕಟ್ಟೆ ಅಂಚೆ ಇಲಾಖೆ ಸಿಬ್ಬಂದಿ ಕು. ಸವೀತಾ ಸ್ವಾಗತಿಸಿ, ಓಡಿಲ್ನಾಳ ಅಂಚೆ ಇಲಾಖೆ ಸಿಬ್ಬಂದಿ ಶ್ರೀಮತಿ ಸುಪ್ರೀಯಾ ವಂದಿಸಿದರು. ಮಂಗಳೂರು ಅಂಚೆ ಕಚೇರಿ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿದರು. ಕಳಿಯ ಮತ್ತು ನ್ಯಾಯತರ್ಪು ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಬೆದ್ರಬೆಟ್ಟು: ಮರಿಯಾoಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕಾರಿಂಜೇಶ್ವರ ದೇವಸ್ಥಾನ ಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya
error: Content is protected !!