23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಶ್ರೀಮತಿ ಮೋಹಿನಿ ಮತ್ತು ಡಾಕಯ್ಯ ಗೌಡ ದಂಪತಿ ಸಮೇತವಾಗಿ ಗೇರುಕಟ್ಟೆ ಸಹಕಾರಿ ಭವನದಲ್ಲಿ ಜು.6 ರಂದು ನಡೆಯಿತು.


ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆ ವಹಿಸಿದ್ದರು.
ಅಂಚೆ ಇಲಾಖೆ ಪುತ್ತೂರು ವಿಭಾಗದ ಉಪ ಅಧಿಕ್ಷಕರಾದ ಮೋಹನ್,ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಕಳಿಯ ಸಿ.ಎ.ಬ್ಯಾಂಕ್ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕವಿತಾ ಶೆಟ್ಟಿ, ಅಂಚೆ ಇಲಾಖೆ ನಿವೃತ್ತ ಕೂಸಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.


ಗೇರುಕಟ್ಟೆ ವಿವಿಧ ಸಂಘದ ವತಿಯಿಂದ ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಸ್ಥಳೀಯ ಯುವಕರ ತಂಡ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಗುರುವಾಯನಕೆರೆ ಅಂಚೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗೇರುಕಟ್ಟೆ ಅಂಚೆ ಇಲಾಖೆ ಸಿಬ್ಬಂದಿ ಕು. ಸವೀತಾ ಸ್ವಾಗತಿಸಿ, ಓಡಿಲ್ನಾಳ ಅಂಚೆ ಇಲಾಖೆ ಸಿಬ್ಬಂದಿ ಶ್ರೀಮತಿ ಸುಪ್ರೀಯಾ ವಂದಿಸಿದರು. ಮಂಗಳೂರು ಅಂಚೆ ಕಚೇರಿ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿದರು. ಕಳಿಯ ಮತ್ತು ನ್ಯಾಯತರ್ಪು ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya
error: Content is protected !!