September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.6 ರಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ಜರುಗಿತು.


ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇಸ್ರೋ ಬೆಂಗಳೂರಿನ ಹಿರಿಯ ವಿಜ್ಞಾನಿ ಪಿ. ವಾಸುದೇವ ರಾವ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದರು. ಸುಧಾ ವಾರಪತ್ರಿಕೆ ಹಾಗೂ ಪ್ರಜಾವಾಣಿ ದಿನ ಪತ್ರಿಕೆ ಬೆಂಗಳೂರಿನ ಮುಖ್ಯ ಉಪ ಸಂಪಾದಕರರಾದ ಶ್ರೀಮತಿ ಉಮಾ ಅನಂತ್ ವಿಶೇಷ ಉಪನ್ಯಾಸ ನೀಡಿದರು.


ಮುಖ್ಯ ಅಭ್ಯಾಗತರಾಗಿ ದ.ಕ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ವಹಿಸಿದ್ದರು.


ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಕಲ್ಮಂಜ ಸರ್ಕಾರಿ ಪ್ರೌಢ ಶಾಲೆಯ ತನುಶ್ರೀ, ಕಾಯರ್ತಡ್ಕ ಸರ್ಕಾರಿ ಪ್ರೌಢ ಶಾಲೆಯ ಮೇಘನಾ ಹಾಗೂ ಮಚ್ಚಿನ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಜಿಯಾದ್ ಇವರನ್ನು ಗೌರವಿಸಲಾಯಿತು. ಪತ್ರಕರ್ತ ಮನೋಹರ್ ಬಳಂಜ ಹಾಗೂ ಲಿಖಿತ ದಂಪತಿ ಇವರ ವತಿಯಿಂದ ಅನಾರೋಗ್ಯಪೀಡಿತ ಮಕ್ಕಳ ಚಿಕಿತ್ಸೆಗಾಗಿ ಅರ್ಹ 6 ಮಂದಿಗೆ ದಿತಿ ಸಾಂತ್ವನ ನಿಧಿಯನ್ನು ಹಸ್ತಾಂತರಿಸಲಾಯಿತು.


ಶಾಲಾ ಮಕ್ಕಳ ಪ್ರಾರ್ಥನೆ ಬಳಿಕ ಸಂಘದ ಕಾರ್ಯದರ್ಶಿ ಗಣೇಶ್ ಶಿರ್ಲಾಲು ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ, ಸದಸ್ಯರಾದ ದೇವಿಪ್ರಸಾದ್, ಆರ್.ಎನ್ ಪೂವಣಿ, ಬಿ.ಎಸ್.ಕುಲಾಲ್, ಅರವಿಂದ ಹೆಬ್ಬಾರ್, ಜಾರಪ್ಪ ಪೂಜಾರಿ, ಮಂಜುನಾಥ ರೈ ಅತಿಥಿ-ಗಣ್ಯರನ್ನು ಗೌರವಿಸಿದರು. ದಿತಿ ಸಾಂತ್ವಾನ ನಿಧಿಬಗ್ಗೆ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ ಮಾಹಿತಿ ನೀಡಿದರು. ದೀಪಕ್ ಅಠವಳೆ ಸಂದೇಶ ವಾಚಿಸಿದರು.


ಜೊತೆ ಕಾರ್ಯದರ್ಶಿ ಮನೋಹರ ಬಳಂಜ ಕಾರ್ಯಕ್ರಮ ನಿರೂಪಿಸಿ, ಸಂಘದ ಉಪಾಧ್ಯಕ್ಷ ಶಿಬಿ ಧರ್ಮಸ್ಥಳ ವಂದಿಸಿದರು.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya
error: Content is protected !!