September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು.5 ರಂದು ಶಾಲಾ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.

ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಸ್ವಾ| ಜೆರೋಮ್ ಡಿಸೋಜ, ಶಾಲಾ ಮುಖೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ ಹಾಗೂ ವಿದ್ಯಾರ್ಥಿಗಳು ಗಿಡವನ್ನು ನೆಟ್ಟು ಅದಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಾದ ಶ್ರಾವಣಿ ಮತ್ತು ಆರನ್ ಸ್ಮಿತ್ ವನಮಹೋತ್ಸವದ ಮಹತ್ವದ ಬಗ್ಗೆ ವಿವರಣೆ ನೀಡಿದರು.

ವಿದ್ಯಾರ್ಥಿಗಳು ಹಾಡು, ನೃತ್ಯದ ಮೂಲಕ ವನಮಹೋತ್ಸವದ ಮಹತ್ವವನ್ನು ಪ್ರದರ್ಶಿಸಿದರು. ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಾವು ದೇವರ ಜೊತೆ, ಜನರ ಜೊತೆ, ಮತ್ತು ಪ್ರಕೃತಿಯ ಜೊತೆಗೆ ಬಾಂಧವ್ಯವನ್ನು ಇಟ್ಟುಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ವಂ|ಸ್ವಾ| ಜೆರೋಮ್ ಡಿಸೋಜರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಬೀಜ ಬಿತ್ತಿ ಗಿಡ ಮರಗಳನ್ನು ಬೆಳೆಸಬೇಕೆಂದು ಹೇಳಿದರು. ಶಾಲಾ ಮುಖೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಗಿಡ ಮರಗಳನ್ನು ಬೆಳೆಸಿ, ಪ್ರಕೃತಿಯನ್ನು ಉಳಿಸಬೇಕೆಂದು ಹೇಳಿದರು. ನಂತರ ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಂಚಲಾಯಿತು. ವಿದ್ಯಾರ್ಥಿಗಳಾದ ಅನೆಟ್ ಅನ್ನ ಚಾರ್ಲಿ ಮತ್ತು ಎಲ್ರಿಕಾ ನಿಕೋಲ್ ಸೇರಾವೋರವರು ಕಾರ್ಯಕ್ರಮವನ್ನು ನಿರೂಪಿಸಿ, ಅದ್ವಿತ ಶೆಟ್ಟಿರವರು ಸ್ವಾಗತಿಸಿ, ಯಶ್ವಿಜ್ ಶೆಟ್ಟಿರವರು ಧನ್ಯವಾದವನ್ನು ಸಮರ್ಪಿಸಿದರು. ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

Related posts

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!