25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿ

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

ಬೆಳ್ತಂಗಡಿ :ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಇಲ್ಲಿ 2023-24ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಜುಲೈ. 6ರಂದು ಸಂಸ್ಥೆಯ ವಠಾರದಲ್ಲಿ ಪ್ರಾಂಶುಪಾಲರಾದ ಶ್ರೀ ರಮೇಶ್ ನಾಯ್ಕ್ ಸರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಕುಸುಮಾವತಿ ಮೇಡಂ ಮಾತನಾಡಿ ತರಬೇತಿದಾರರು ಜೀವನದಲ್ಲಿ ಸಮಯ ಮತ್ತು ಶಿಸ್ತಿನ ಕಡೆ ಹೆಚ್ಚು ಗಮನ ಹರಿಸಿದರೆ ಮಾತ್ರ ಉತ್ತಮ ತರಬೇತಿದಾರನಾಗಲು ಸಾಧ್ಯ ಎಂದು ಹೇಳಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀ ವೀರೇಂದ್ರ ಸರ್ ಮಾತನಾಡಿ ತರಬೇತಿದಾರರು ಓದಿನೊಂದಿಗೆ ತಮ್ಮ ತಂದೆ ತಾಯಿ ಹಾಗೂ ಗುರುಗಳನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು. ಪ್ರಾಂಶುಪಾಲರು ಅಧ್ಯಕ್ಷೀಯ ಮಾತುಗಳನ್ನಾಡಿ ತರಬೇತಿದಾರು ಉತ್ತಮ ತರಬೇತಿ ಪಡೆದು ಮುಂದೆ ದುಡಿಯುವ ಕಂಪೆನಿಗಳಲ್ಲಿ ಅದನ್ನು ಅಳವಡಿಸಿಕೊಳ್ಳಬೇಕು ಮತ್ತು ಇಂದಿನ ಇಂದಿನ ತಾಂತ್ರಿಕ ಯುಗದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗ ಅವಕಾಶಗಳಿವೆ ಎಂದು ತಿಳಿಸಿದರು.
2023-24ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿವರಗಳನ್ನು ವಿದ್ಯಾರ್ಥಿ ನಾಯಕ ಸುಜನ್ ಸಾಲಿಯಾನ್ ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ವೇಳೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿನೀಶ್ ಕುಮಾರ್ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.
2023-24ನೇ ಸಾಲಿನ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಹಿರಿಯ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು.
ವೇದಿಕೆಯಲ್ಲಿ ಕಛೇರಿ ಅಧೀಕ್ಷಕಿ ಶರಣ್ಯ ಮೇಡಂ, ಪ್ರಥಮ ದರ್ಜೆ ಸಹಾಯಕಿ ಕುಮಾರಿ ವಿನುತ ಮೇಡಂ, ಎಸ್ ಎಮ್ ಇ ಪುರಂದರ ಕೆ ಮತ್ತು ರವಿಚಂದ್ರ ಗೌಡ ಮತ್ತು ವಿದ್ಯಾರ್ಥಿ ನಾಯಕ ಸುಜನ್ ಸಾಲಿಯಾನ್ ಉಪಸ್ಥಿತರಿದ್ದರು.
ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಅಭಿಷೇಕ್ ಸ್ವಾಗತಿಸಿದರು ಎಮ್ ಆರ್ ಎ ಸಿ ವಿಭಾಗದ ಲತೇಶ್ ಧನ್ಯವಾದ ಅರ್ಪಿಸಿದರು. ಐ ಆರ್ ಡಿ ಎಮ್ ವಿಭಾಗದ ಅಜಯ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!