
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು. ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ ಜುಲೈ. 7ರಂದು ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕರಾದ ವಿಜಿ ಸುಬ್ಬಾಪುರ ಮಠ್ ಉದ್ಘಾಟಿಸಿ ಶುಭ ಹಾರೈಸಿದರು
ಅಧ್ಯಕ್ಷತೆಯನ್ನು ಕೇಂದ್ರ ಪ್ರಗತಿ ಬಂದು ಒಕ್ಕೂಟ ಬೆಳ್ತಂಗಡಿ ಅಧ್ಯಕ್ಷರಾದ ಸೀತಾರಾಮ್ ಆರ್ ವಹಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ, ಬೆಳ್ತಂಗಡಿ ಹಿರಿಯ ವಕೀಲರಾದ ಧನಂಜಯ ರಾವ್., ಬೆಳ್ತಂಗಡಿ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ ಕಾಸಿಂ ಮಲ್ಲಿಗೆ ಮನೆ, ಮೆಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದ ಧರ್ಮದರ್ಶಿಗಳಾದ ಯೋಗೀಶ್ ಪೂಜಾರಿ , ಬೆಳ್ತಂಗಡಿ ಭಜನಾ ಪರಿಷತ್ ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್,
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಜನಾರ್ಧನ್ ಬೆಳ್ತಂಗಡಿ ವಲಯದ ಯೋಜನಾಧಿಕಾರಿ ಸುರೇಂದ್ರ., ಒಕ್ಕೂಟದ ಅಧ್ಯಕ್ಷರುಗಳಾ ನಾರಾಯಣ ಪೂಜಾರಿ, ಪ್ರಕಾಶ್ ಮೆರ್ಲ. ಜನಾರ್ದನ, ಸತೀಶ, ಶ್ರೀಕೇಶ್ ಕೋಟ್ಯಾನ್, ಕೃಷ್ಣಪ್ಪ. ಜಾರಪ್ಪ ಗೌಡ. ಚರಣ್ ಕುಮಾರ್. ತಿಲೋತಮ.
ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕೃಷಿ ಅಧಿಕಾರಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿ. ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಸ್ವಾಗತಿಸಿ. ಹರೀಶ್ ವರದಿ ಮಂಡಿಸಿದರು.













