May 6, 2026
ಗ್ರಾಮಾಂತರ ಸುದ್ದಿ

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

ಬೆಳ್ತಂಗಡಿ :ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಇಲ್ಲಿ 2023-24ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಜುಲೈ. 6ರಂದು ಸಂಸ್ಥೆಯ ವಠಾರದಲ್ಲಿ ಪ್ರಾಂಶುಪಾಲರಾದ ಶ್ರೀ ರಮೇಶ್ ನಾಯ್ಕ್ ಸರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಕುಸುಮಾವತಿ ಮೇಡಂ ಮಾತನಾಡಿ ತರಬೇತಿದಾರರು ಜೀವನದಲ್ಲಿ ಸಮಯ ಮತ್ತು ಶಿಸ್ತಿನ ಕಡೆ ಹೆಚ್ಚು ಗಮನ ಹರಿಸಿದರೆ ಮಾತ್ರ ಉತ್ತಮ ತರಬೇತಿದಾರನಾಗಲು ಸಾಧ್ಯ ಎಂದು ಹೇಳಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀ ವೀರೇಂದ್ರ ಸರ್ ಮಾತನಾಡಿ ತರಬೇತಿದಾರರು ಓದಿನೊಂದಿಗೆ ತಮ್ಮ ತಂದೆ ತಾಯಿ ಹಾಗೂ ಗುರುಗಳನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು. ಪ್ರಾಂಶುಪಾಲರು ಅಧ್ಯಕ್ಷೀಯ ಮಾತುಗಳನ್ನಾಡಿ ತರಬೇತಿದಾರು ಉತ್ತಮ ತರಬೇತಿ ಪಡೆದು ಮುಂದೆ ದುಡಿಯುವ ಕಂಪೆನಿಗಳಲ್ಲಿ ಅದನ್ನು ಅಳವಡಿಸಿಕೊಳ್ಳಬೇಕು ಮತ್ತು ಇಂದಿನ ಇಂದಿನ ತಾಂತ್ರಿಕ ಯುಗದಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗ ಅವಕಾಶಗಳಿವೆ ಎಂದು ತಿಳಿಸಿದರು.
2023-24ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿವರಗಳನ್ನು ವಿದ್ಯಾರ್ಥಿ ನಾಯಕ ಸುಜನ್ ಸಾಲಿಯಾನ್ ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ವೇಳೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿನೀಶ್ ಕುಮಾರ್ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.
2023-24ನೇ ಸಾಲಿನ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಹಿರಿಯ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು.
ವೇದಿಕೆಯಲ್ಲಿ ಕಛೇರಿ ಅಧೀಕ್ಷಕಿ ಶರಣ್ಯ ಮೇಡಂ, ಪ್ರಥಮ ದರ್ಜೆ ಸಹಾಯಕಿ ಕುಮಾರಿ ವಿನುತ ಮೇಡಂ, ಎಸ್ ಎಮ್ ಇ ಪುರಂದರ ಕೆ ಮತ್ತು ರವಿಚಂದ್ರ ಗೌಡ ಮತ್ತು ವಿದ್ಯಾರ್ಥಿ ನಾಯಕ ಸುಜನ್ ಸಾಲಿಯಾನ್ ಉಪಸ್ಥಿತರಿದ್ದರು.
ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ಅಭಿಷೇಕ್ ಸ್ವಾಗತಿಸಿದರು ಎಮ್ ಆರ್ ಎ ಸಿ ವಿಭಾಗದ ಲತೇಶ್ ಧನ್ಯವಾದ ಅರ್ಪಿಸಿದರು. ಐ ಆರ್ ಡಿ ಎಮ್ ವಿಭಾಗದ ಅಜಯ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!