ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಧರ್ಮಸ್ಥಳ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು (ಜು.8) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿಗಳಾದ ಉಮಾಪತಿ , ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ರಾಘವೇಂದ್ರ , ಜಂಟಿ ಕಾರ್ಯದರ್ಶಿಗಳಾದ ಹನುಮಂತರಾಯಪ್ಪ , ಮೂಡ್ಯಾ ಚಂದ್ರು ಕುಕ್ಕುಟ ಮಹಾ ಮಂಡಳಿ ಅಧ್ಯಕ್ಷರು, ಹಾಗು ನಿರ್ದೇಶಕರುಗಳಾದ ಪುಟ್ಟಸ್ವಾಮಿ , ಡಾ| ಆಂಜನಪ್ಪ, ಶ್ರೀ ರಘುಗೌಡ ಹಾಸನ ಅವರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ನೂತನವಾಗಿ ಆಯ್ಕೆಯಾದ ಎಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಅಭಿನಂದಿಸಿದರು.

Leave a Comment

error: Content is protected !!