24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ಸರಬರಾಜು ಪಂಪ್ ಶೆಡ್ ಬಿದ್ದಿದ್ದು, ದೈವದ ಕಟ್ಟೆ ಕೂಡಾ ಜರಿಯುವ ಹಂತದಲ್ಲಿದೆ.


ದೇವಸ್ಥಾನದ ಬಲಬದಿ ಮನೆಯೊಂದಿದ್ದು ಅವರು ತನ್ನ ಜಾಗವನ್ನು ಇತ್ತೀಚೆಗೆ ಸಮತಟ್ಟುಗೊಳಿಸಿದ್ದರು.ಈ ಸಂಧರ್ಭ ದೇವಸ್ಥಾನದ ಅಧ್ಯಕ್ಷರು ಸಮಸ್ಯೆಯಾಗದಂತೆ ಸಮತಟ್ಟುಗೊಳಿಸುವಂತೆ ಸೂಚಿಸಿದ್ದರು. ದೇವಸ್ಥಾನದ ಜಾಗ ಇವರ ಜಾಗಕ್ಕಿಂತ 15- 20ಅಡಿ ಎತ್ತರದಲ್ಲಿದ್ದು, ಸಮತಟ್ಟು ಮಾಡುವ ವೇಳೆ ನೀರು ಹರಿಯುವ ಕಣಿಯನ್ನು ಕೂಡಾ ತೆಗೆದಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ್ ಹಾಗೂ ತಹಶೀಲ್ದಾರಿಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!