July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ಸರಬರಾಜು ಪಂಪ್ ಶೆಡ್ ಬಿದ್ದಿದ್ದು, ದೈವದ ಕಟ್ಟೆ ಕೂಡಾ ಜರಿಯುವ ಹಂತದಲ್ಲಿದೆ.


ದೇವಸ್ಥಾನದ ಬಲಬದಿ ಮನೆಯೊಂದಿದ್ದು ಅವರು ತನ್ನ ಜಾಗವನ್ನು ಇತ್ತೀಚೆಗೆ ಸಮತಟ್ಟುಗೊಳಿಸಿದ್ದರು.ಈ ಸಂಧರ್ಭ ದೇವಸ್ಥಾನದ ಅಧ್ಯಕ್ಷರು ಸಮಸ್ಯೆಯಾಗದಂತೆ ಸಮತಟ್ಟುಗೊಳಿಸುವಂತೆ ಸೂಚಿಸಿದ್ದರು. ದೇವಸ್ಥಾನದ ಜಾಗ ಇವರ ಜಾಗಕ್ಕಿಂತ 15- 20ಅಡಿ ಎತ್ತರದಲ್ಲಿದ್ದು, ಸಮತಟ್ಟು ಮಾಡುವ ವೇಳೆ ನೀರು ಹರಿಯುವ ಕಣಿಯನ್ನು ಕೂಡಾ ತೆಗೆದಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ್ ಹಾಗೂ ತಹಶೀಲ್ದಾರಿಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ಜನಮಂಗಲ ಸಲಕರಣೆ ವಿತರಣೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya
error: Content is protected !!