25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ಸರಬರಾಜು ಪಂಪ್ ಶೆಡ್ ಬಿದ್ದಿದ್ದು, ದೈವದ ಕಟ್ಟೆ ಕೂಡಾ ಜರಿಯುವ ಹಂತದಲ್ಲಿದೆ.


ದೇವಸ್ಥಾನದ ಬಲಬದಿ ಮನೆಯೊಂದಿದ್ದು ಅವರು ತನ್ನ ಜಾಗವನ್ನು ಇತ್ತೀಚೆಗೆ ಸಮತಟ್ಟುಗೊಳಿಸಿದ್ದರು.ಈ ಸಂಧರ್ಭ ದೇವಸ್ಥಾನದ ಅಧ್ಯಕ್ಷರು ಸಮಸ್ಯೆಯಾಗದಂತೆ ಸಮತಟ್ಟುಗೊಳಿಸುವಂತೆ ಸೂಚಿಸಿದ್ದರು. ದೇವಸ್ಥಾನದ ಜಾಗ ಇವರ ಜಾಗಕ್ಕಿಂತ 15- 20ಅಡಿ ಎತ್ತರದಲ್ಲಿದ್ದು, ಸಮತಟ್ಟು ಮಾಡುವ ವೇಳೆ ನೀರು ಹರಿಯುವ ಕಣಿಯನ್ನು ಕೂಡಾ ತೆಗೆದಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ್ ಹಾಗೂ ತಹಶೀಲ್ದಾರಿಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!