23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ಸರಬರಾಜು ಪಂಪ್ ಶೆಡ್ ಬಿದ್ದಿದ್ದು, ದೈವದ ಕಟ್ಟೆ ಕೂಡಾ ಜರಿಯುವ ಹಂತದಲ್ಲಿದೆ.


ದೇವಸ್ಥಾನದ ಬಲಬದಿ ಮನೆಯೊಂದಿದ್ದು ಅವರು ತನ್ನ ಜಾಗವನ್ನು ಇತ್ತೀಚೆಗೆ ಸಮತಟ್ಟುಗೊಳಿಸಿದ್ದರು.ಈ ಸಂಧರ್ಭ ದೇವಸ್ಥಾನದ ಅಧ್ಯಕ್ಷರು ಸಮಸ್ಯೆಯಾಗದಂತೆ ಸಮತಟ್ಟುಗೊಳಿಸುವಂತೆ ಸೂಚಿಸಿದ್ದರು. ದೇವಸ್ಥಾನದ ಜಾಗ ಇವರ ಜಾಗಕ್ಕಿಂತ 15- 20ಅಡಿ ಎತ್ತರದಲ್ಲಿದ್ದು, ಸಮತಟ್ಟು ಮಾಡುವ ವೇಳೆ ನೀರು ಹರಿಯುವ ಕಣಿಯನ್ನು ಕೂಡಾ ತೆಗೆದಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ್ ಹಾಗೂ ತಹಶೀಲ್ದಾರಿಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!