23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

ಬೆಳ್ತಂಗಡಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಾಮಗಾರಿ ಪ್ರಗತಿಯಲ್ಲಿದ್ದು , ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ ಕಾರಣದಿಂದ ಬರೆಯ ಮಣ್ಣು ಕುಸಿದು ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆಯಿದೆ.

ಬೆಳ್ತಂಗಡಿ ತಾಲೂಕು ಕಛೇರಿಯ 105 ವರ್ಷದ ಹಿಂದಿನ ಕಟ್ಟಡವನ್ನು ಕೆಡವಿ ಆ ಜಾಗದಲ್ಲಿ ನೂತನ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಬಸ್ ನಿಲ್ದಾಣದ ಪಾರ್ಕಿಂಗ್ ಗಾಗಿ 10 ರಿಂದ 15 ಅಡಿ ಆಳದಲ್ಲಿ ಮಣ್ಣು ತೆಗೆಯಲಾಗಿದೆ. ಇದರ ಸುತ್ತಲೂ ತಾಲೂಕು ಕಛೇರಿ , ಪೊಲೀಸ್ ಠಾಣೆ , ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣ , ಗಿರಣಿ ಅಂಗಡಿಗಳಿದ್ದು , ಈ ಗುಂಡಿಯಲ್ಲಿ ಮಳೆ ನೀರು ನಿಂತು ಈಜುಕೊಳದಂತೆ ಬಾಸವಾಗುತ್ತಿದೆ. ಮತ್ತೊಂದೆಡೆ ತಡೆಗೋಡೆ ನಿರ್ಮಾಣ ಕಾರ್ಯ ನಡೆದು ಮಣ್ಣು ತುಂಬಿಸಲಾಗಿದ್ದರೂ ವಿಪರೀತ ಮಳೆಯ ಕಾರಣದಿಂದ ಪೋಲಿಸ್ ಠಾಣೆಯ ಭಾಗದಲ್ಲಿ ಮಣ್ಣು ಕುಸಿದಿದೆ. ಇನ್ನಷ್ಟು ಮಳೆ ಬಂದರೆ ಇನ್ನಷ್ಟು ಮಣ್ಣು ಕುಸಿದು ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿದು ಅಪಾಯ ಉಂಟಾಗುವ ಸಾಧ್ಯತೆಯಿದೆ. ಅವೈಜ್ಞಾನಿಕ ರೀತಿಯಲ್ಲಿ ಕೆಲಸ ನಿರ್ವಹಣೆಯಿಂದ ಭೂಕುಸಿತ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸೂಕ್ತ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯಕಾರಿ ಸನ್ನಿವೇಶ ಎದುರಾಗಬಹುದು ಎಂದು ಹೇಳಲಾಗುತ್ತದೆ.

Related posts

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
error: Content is protected !!