26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

ಬೆಳ್ತಂಗಡಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಾಮಗಾರಿ ಪ್ರಗತಿಯಲ್ಲಿದ್ದು , ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ ಕಾರಣದಿಂದ ಬರೆಯ ಮಣ್ಣು ಕುಸಿದು ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆಯಿದೆ.

ಬೆಳ್ತಂಗಡಿ ತಾಲೂಕು ಕಛೇರಿಯ 105 ವರ್ಷದ ಹಿಂದಿನ ಕಟ್ಟಡವನ್ನು ಕೆಡವಿ ಆ ಜಾಗದಲ್ಲಿ ನೂತನ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಬಸ್ ನಿಲ್ದಾಣದ ಪಾರ್ಕಿಂಗ್ ಗಾಗಿ 10 ರಿಂದ 15 ಅಡಿ ಆಳದಲ್ಲಿ ಮಣ್ಣು ತೆಗೆಯಲಾಗಿದೆ. ಇದರ ಸುತ್ತಲೂ ತಾಲೂಕು ಕಛೇರಿ , ಪೊಲೀಸ್ ಠಾಣೆ , ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣ , ಗಿರಣಿ ಅಂಗಡಿಗಳಿದ್ದು , ಈ ಗುಂಡಿಯಲ್ಲಿ ಮಳೆ ನೀರು ನಿಂತು ಈಜುಕೊಳದಂತೆ ಬಾಸವಾಗುತ್ತಿದೆ. ಮತ್ತೊಂದೆಡೆ ತಡೆಗೋಡೆ ನಿರ್ಮಾಣ ಕಾರ್ಯ ನಡೆದು ಮಣ್ಣು ತುಂಬಿಸಲಾಗಿದ್ದರೂ ವಿಪರೀತ ಮಳೆಯ ಕಾರಣದಿಂದ ಪೋಲಿಸ್ ಠಾಣೆಯ ಭಾಗದಲ್ಲಿ ಮಣ್ಣು ಕುಸಿದಿದೆ. ಇನ್ನಷ್ಟು ಮಳೆ ಬಂದರೆ ಇನ್ನಷ್ಟು ಮಣ್ಣು ಕುಸಿದು ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿದು ಅಪಾಯ ಉಂಟಾಗುವ ಸಾಧ್ಯತೆಯಿದೆ. ಅವೈಜ್ಞಾನಿಕ ರೀತಿಯಲ್ಲಿ ಕೆಲಸ ನಿರ್ವಹಣೆಯಿಂದ ಭೂಕುಸಿತ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸೂಕ್ತ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯಕಾರಿ ಸನ್ನಿವೇಶ ಎದುರಾಗಬಹುದು ಎಂದು ಹೇಳಲಾಗುತ್ತದೆ.

Related posts

ಕುಂಟಿನಿ ಸ.ಕಿ.ಪ್ರಾ. ಶಾಲೆಯ ಎಸ್.ಡಿ.ಎಮ್.ಸಿ. ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಉಪಾಧ್ಯಕ್ಷರಾಗಿ ಇಲ್ಯಾಸ್ ಆಯ್ಕೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya
error: Content is protected !!