22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

ಬೆಳ್ತಂಗಡಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಕಾಮಗಾರಿ ಪ್ರಗತಿಯಲ್ಲಿದ್ದು , ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ ಕಾರಣದಿಂದ ಬರೆಯ ಮಣ್ಣು ಕುಸಿದು ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆಯಿದೆ.

ಬೆಳ್ತಂಗಡಿ ತಾಲೂಕು ಕಛೇರಿಯ 105 ವರ್ಷದ ಹಿಂದಿನ ಕಟ್ಟಡವನ್ನು ಕೆಡವಿ ಆ ಜಾಗದಲ್ಲಿ ನೂತನ ಬಸ್ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಬಸ್ ನಿಲ್ದಾಣದ ಪಾರ್ಕಿಂಗ್ ಗಾಗಿ 10 ರಿಂದ 15 ಅಡಿ ಆಳದಲ್ಲಿ ಮಣ್ಣು ತೆಗೆಯಲಾಗಿದೆ. ಇದರ ಸುತ್ತಲೂ ತಾಲೂಕು ಕಛೇರಿ , ಪೊಲೀಸ್ ಠಾಣೆ , ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣ , ಗಿರಣಿ ಅಂಗಡಿಗಳಿದ್ದು , ಈ ಗುಂಡಿಯಲ್ಲಿ ಮಳೆ ನೀರು ನಿಂತು ಈಜುಕೊಳದಂತೆ ಬಾಸವಾಗುತ್ತಿದೆ. ಮತ್ತೊಂದೆಡೆ ತಡೆಗೋಡೆ ನಿರ್ಮಾಣ ಕಾರ್ಯ ನಡೆದು ಮಣ್ಣು ತುಂಬಿಸಲಾಗಿದ್ದರೂ ವಿಪರೀತ ಮಳೆಯ ಕಾರಣದಿಂದ ಪೋಲಿಸ್ ಠಾಣೆಯ ಭಾಗದಲ್ಲಿ ಮಣ್ಣು ಕುಸಿದಿದೆ. ಇನ್ನಷ್ಟು ಮಳೆ ಬಂದರೆ ಇನ್ನಷ್ಟು ಮಣ್ಣು ಕುಸಿದು ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿದು ಅಪಾಯ ಉಂಟಾಗುವ ಸಾಧ್ಯತೆಯಿದೆ. ಅವೈಜ್ಞಾನಿಕ ರೀತಿಯಲ್ಲಿ ಕೆಲಸ ನಿರ್ವಹಣೆಯಿಂದ ಭೂಕುಸಿತ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸೂಕ್ತ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯಕಾರಿ ಸನ್ನಿವೇಶ ಎದುರಾಗಬಹುದು ಎಂದು ಹೇಳಲಾಗುತ್ತದೆ.

Related posts

ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya
error: Content is protected !!