37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು ಕಳೆದರೂ ಇನ್ನೂ ಆಗಲಿಲ್ಲ .

ಹಗಲಲ್ಲಿ ಸಮರ್ಪಕ ವಿದ್ಯುತ್ ಇಲ್ಲ 5 ದಿವಸದಿಂದ ರಾತ್ರಿ 11ಗಂಟೆ ಸಮಯದಿಂದ ಬೆಳಿಗ್ಗೆ 7,8 ಗಂಟೆ ಯವರೆಗೆ ಪ್ರತಿ ನಿತ್ಯ ವಿದ್ಯುತ್ ಇರುವುದು ಇಲ್ಲ. ಸೊಳ್ಳೆಕಾಟವು ಅಧಿಕವಾಗಿರುವುದರಿಂದ ಡೆಂಗ್ಯೂ ಜ್ವರವು ಹೆಚ್ಚುತ್ತಿದ್ದು.. ಪ್ಯಾನ್ ಇಲ್ಲದೆ ನಿದ್ದೆ ಮಾಡುವುದೆ ಕಷ್ಟವಾಗಿದೆ, ಬೆಳಿಗ್ಗೆ ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಉಪಹಾರ ತಯಾರಿ ಮಾಡುವುದು ಸಮಸ್ಯೆ ಯಾಗುತ್ತಿದೆ.
ಇನ್ನು ಹಲವು ಕಡೆ ಹೆಚ್ ಟಿ ಲೈನ್ ತಾಗಿಕೊಂಡಿರುವ ಗಿಡ ಗಂಟಿಗಳ ತೆರವು ಸಂಪೂರ್ಣವಾಗಿಲ್ಲ, ಇತ್ತೀಚೆಗೆ ಬಂಗಾಡಿ ಫಿಚಾಲಾರು ಟಿಸಿ ಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಹರಿದು ಲಿಂಗಾಂತ್ಯಾರು ಜನಾರ್ಧನ ದೇವಾಡಿಗರ ಮನೆಯ ಟಿವಿ ಸಂಪೂರ್ಣ ಸುಟ್ಟು ಹೋಗಿ ಮನೆಯು ಅಪಾಯದಿಂದ ಪಾರಾಗಿದೆ. ನೆರೆಯ 2 ಮನೆಯ ಪ್ಯಾನ್ ಸುಟ್ಟು ಹೋಗಿವೆ. ಮಳೆಗಾಲದ ಮುಂಚೆ ತೆರವುಗೊಳಿಸಬೇಕಾದ ಮರ, ಗಿಡ ,ಗೆಲ್ಲುಗಳನ್ನು ಮಳೆಗಾಲದಲ್ಲಿ ತೆರವುಗೊಳಿಸಲು ಮಳೆ ಅಡ್ಡಿಯಾಗುತ್ತಿರುವ ಕಾರಣ ತಿಳಿಸುತ್ತಾರೆ.

ಇಲ್ಲಿ ಲೈನ್ ಮ್ಯಾನ್ ಸಿಂಬಂದಿಗಳ ಕೊರತೆಯು ಇದ್ದು .ಕೂಡಲೆ ಸಂಬಂಧ ಪಟ್ಟ ಆಧಿಕಾರಿಗಳು ವಿದ್ಯುತ್ ಸಮಸೈ ಯನ್ನು ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ

Related posts

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya
error: Content is protected !!