April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು ಕಳೆದರೂ ಇನ್ನೂ ಆಗಲಿಲ್ಲ .

ಹಗಲಲ್ಲಿ ಸಮರ್ಪಕ ವಿದ್ಯುತ್ ಇಲ್ಲ 5 ದಿವಸದಿಂದ ರಾತ್ರಿ 11ಗಂಟೆ ಸಮಯದಿಂದ ಬೆಳಿಗ್ಗೆ 7,8 ಗಂಟೆ ಯವರೆಗೆ ಪ್ರತಿ ನಿತ್ಯ ವಿದ್ಯುತ್ ಇರುವುದು ಇಲ್ಲ. ಸೊಳ್ಳೆಕಾಟವು ಅಧಿಕವಾಗಿರುವುದರಿಂದ ಡೆಂಗ್ಯೂ ಜ್ವರವು ಹೆಚ್ಚುತ್ತಿದ್ದು.. ಪ್ಯಾನ್ ಇಲ್ಲದೆ ನಿದ್ದೆ ಮಾಡುವುದೆ ಕಷ್ಟವಾಗಿದೆ, ಬೆಳಿಗ್ಗೆ ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಉಪಹಾರ ತಯಾರಿ ಮಾಡುವುದು ಸಮಸ್ಯೆ ಯಾಗುತ್ತಿದೆ.
ಇನ್ನು ಹಲವು ಕಡೆ ಹೆಚ್ ಟಿ ಲೈನ್ ತಾಗಿಕೊಂಡಿರುವ ಗಿಡ ಗಂಟಿಗಳ ತೆರವು ಸಂಪೂರ್ಣವಾಗಿಲ್ಲ, ಇತ್ತೀಚೆಗೆ ಬಂಗಾಡಿ ಫಿಚಾಲಾರು ಟಿಸಿ ಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಹರಿದು ಲಿಂಗಾಂತ್ಯಾರು ಜನಾರ್ಧನ ದೇವಾಡಿಗರ ಮನೆಯ ಟಿವಿ ಸಂಪೂರ್ಣ ಸುಟ್ಟು ಹೋಗಿ ಮನೆಯು ಅಪಾಯದಿಂದ ಪಾರಾಗಿದೆ. ನೆರೆಯ 2 ಮನೆಯ ಪ್ಯಾನ್ ಸುಟ್ಟು ಹೋಗಿವೆ. ಮಳೆಗಾಲದ ಮುಂಚೆ ತೆರವುಗೊಳಿಸಬೇಕಾದ ಮರ, ಗಿಡ ,ಗೆಲ್ಲುಗಳನ್ನು ಮಳೆಗಾಲದಲ್ಲಿ ತೆರವುಗೊಳಿಸಲು ಮಳೆ ಅಡ್ಡಿಯಾಗುತ್ತಿರುವ ಕಾರಣ ತಿಳಿಸುತ್ತಾರೆ.

ಇಲ್ಲಿ ಲೈನ್ ಮ್ಯಾನ್ ಸಿಂಬಂದಿಗಳ ಕೊರತೆಯು ಇದ್ದು .ಕೂಡಲೆ ಸಂಬಂಧ ಪಟ್ಟ ಆಧಿಕಾರಿಗಳು ವಿದ್ಯುತ್ ಸಮಸೈ ಯನ್ನು ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ

Related posts

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ