25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು ಕಳೆದರೂ ಇನ್ನೂ ಆಗಲಿಲ್ಲ .

ಹಗಲಲ್ಲಿ ಸಮರ್ಪಕ ವಿದ್ಯುತ್ ಇಲ್ಲ 5 ದಿವಸದಿಂದ ರಾತ್ರಿ 11ಗಂಟೆ ಸಮಯದಿಂದ ಬೆಳಿಗ್ಗೆ 7,8 ಗಂಟೆ ಯವರೆಗೆ ಪ್ರತಿ ನಿತ್ಯ ವಿದ್ಯುತ್ ಇರುವುದು ಇಲ್ಲ. ಸೊಳ್ಳೆಕಾಟವು ಅಧಿಕವಾಗಿರುವುದರಿಂದ ಡೆಂಗ್ಯೂ ಜ್ವರವು ಹೆಚ್ಚುತ್ತಿದ್ದು.. ಪ್ಯಾನ್ ಇಲ್ಲದೆ ನಿದ್ದೆ ಮಾಡುವುದೆ ಕಷ್ಟವಾಗಿದೆ, ಬೆಳಿಗ್ಗೆ ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಉಪಹಾರ ತಯಾರಿ ಮಾಡುವುದು ಸಮಸ್ಯೆ ಯಾಗುತ್ತಿದೆ.
ಇನ್ನು ಹಲವು ಕಡೆ ಹೆಚ್ ಟಿ ಲೈನ್ ತಾಗಿಕೊಂಡಿರುವ ಗಿಡ ಗಂಟಿಗಳ ತೆರವು ಸಂಪೂರ್ಣವಾಗಿಲ್ಲ, ಇತ್ತೀಚೆಗೆ ಬಂಗಾಡಿ ಫಿಚಾಲಾರು ಟಿಸಿ ಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಹರಿದು ಲಿಂಗಾಂತ್ಯಾರು ಜನಾರ್ಧನ ದೇವಾಡಿಗರ ಮನೆಯ ಟಿವಿ ಸಂಪೂರ್ಣ ಸುಟ್ಟು ಹೋಗಿ ಮನೆಯು ಅಪಾಯದಿಂದ ಪಾರಾಗಿದೆ. ನೆರೆಯ 2 ಮನೆಯ ಪ್ಯಾನ್ ಸುಟ್ಟು ಹೋಗಿವೆ. ಮಳೆಗಾಲದ ಮುಂಚೆ ತೆರವುಗೊಳಿಸಬೇಕಾದ ಮರ, ಗಿಡ ,ಗೆಲ್ಲುಗಳನ್ನು ಮಳೆಗಾಲದಲ್ಲಿ ತೆರವುಗೊಳಿಸಲು ಮಳೆ ಅಡ್ಡಿಯಾಗುತ್ತಿರುವ ಕಾರಣ ತಿಳಿಸುತ್ತಾರೆ.

ಇಲ್ಲಿ ಲೈನ್ ಮ್ಯಾನ್ ಸಿಂಬಂದಿಗಳ ಕೊರತೆಯು ಇದ್ದು .ಕೂಡಲೆ ಸಂಬಂಧ ಪಟ್ಟ ಆಧಿಕಾರಿಗಳು ವಿದ್ಯುತ್ ಸಮಸೈ ಯನ್ನು ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ

Related posts

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya
error: Content is protected !!