23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು ಕಳೆದರೂ ಇನ್ನೂ ಆಗಲಿಲ್ಲ .

ಹಗಲಲ್ಲಿ ಸಮರ್ಪಕ ವಿದ್ಯುತ್ ಇಲ್ಲ 5 ದಿವಸದಿಂದ ರಾತ್ರಿ 11ಗಂಟೆ ಸಮಯದಿಂದ ಬೆಳಿಗ್ಗೆ 7,8 ಗಂಟೆ ಯವರೆಗೆ ಪ್ರತಿ ನಿತ್ಯ ವಿದ್ಯುತ್ ಇರುವುದು ಇಲ್ಲ. ಸೊಳ್ಳೆಕಾಟವು ಅಧಿಕವಾಗಿರುವುದರಿಂದ ಡೆಂಗ್ಯೂ ಜ್ವರವು ಹೆಚ್ಚುತ್ತಿದ್ದು.. ಪ್ಯಾನ್ ಇಲ್ಲದೆ ನಿದ್ದೆ ಮಾಡುವುದೆ ಕಷ್ಟವಾಗಿದೆ, ಬೆಳಿಗ್ಗೆ ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಉಪಹಾರ ತಯಾರಿ ಮಾಡುವುದು ಸಮಸ್ಯೆ ಯಾಗುತ್ತಿದೆ.
ಇನ್ನು ಹಲವು ಕಡೆ ಹೆಚ್ ಟಿ ಲೈನ್ ತಾಗಿಕೊಂಡಿರುವ ಗಿಡ ಗಂಟಿಗಳ ತೆರವು ಸಂಪೂರ್ಣವಾಗಿಲ್ಲ, ಇತ್ತೀಚೆಗೆ ಬಂಗಾಡಿ ಫಿಚಾಲಾರು ಟಿಸಿ ಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಹರಿದು ಲಿಂಗಾಂತ್ಯಾರು ಜನಾರ್ಧನ ದೇವಾಡಿಗರ ಮನೆಯ ಟಿವಿ ಸಂಪೂರ್ಣ ಸುಟ್ಟು ಹೋಗಿ ಮನೆಯು ಅಪಾಯದಿಂದ ಪಾರಾಗಿದೆ. ನೆರೆಯ 2 ಮನೆಯ ಪ್ಯಾನ್ ಸುಟ್ಟು ಹೋಗಿವೆ. ಮಳೆಗಾಲದ ಮುಂಚೆ ತೆರವುಗೊಳಿಸಬೇಕಾದ ಮರ, ಗಿಡ ,ಗೆಲ್ಲುಗಳನ್ನು ಮಳೆಗಾಲದಲ್ಲಿ ತೆರವುಗೊಳಿಸಲು ಮಳೆ ಅಡ್ಡಿಯಾಗುತ್ತಿರುವ ಕಾರಣ ತಿಳಿಸುತ್ತಾರೆ.

ಇಲ್ಲಿ ಲೈನ್ ಮ್ಯಾನ್ ಸಿಂಬಂದಿಗಳ ಕೊರತೆಯು ಇದ್ದು .ಕೂಡಲೆ ಸಂಬಂಧ ಪಟ್ಟ ಆಧಿಕಾರಿಗಳು ವಿದ್ಯುತ್ ಸಮಸೈ ಯನ್ನು ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ

Related posts

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya
error: Content is protected !!