23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು ಕಳೆದರೂ ಇನ್ನೂ ಆಗಲಿಲ್ಲ .

ಹಗಲಲ್ಲಿ ಸಮರ್ಪಕ ವಿದ್ಯುತ್ ಇಲ್ಲ 5 ದಿವಸದಿಂದ ರಾತ್ರಿ 11ಗಂಟೆ ಸಮಯದಿಂದ ಬೆಳಿಗ್ಗೆ 7,8 ಗಂಟೆ ಯವರೆಗೆ ಪ್ರತಿ ನಿತ್ಯ ವಿದ್ಯುತ್ ಇರುವುದು ಇಲ್ಲ. ಸೊಳ್ಳೆಕಾಟವು ಅಧಿಕವಾಗಿರುವುದರಿಂದ ಡೆಂಗ್ಯೂ ಜ್ವರವು ಹೆಚ್ಚುತ್ತಿದ್ದು.. ಪ್ಯಾನ್ ಇಲ್ಲದೆ ನಿದ್ದೆ ಮಾಡುವುದೆ ಕಷ್ಟವಾಗಿದೆ, ಬೆಳಿಗ್ಗೆ ಶಾಲಾ ಮಕ್ಕಳಿಗೆ, ಕೆಲಸಕ್ಕೆ ಹೋಗುವವರಿಗೆ ಉಪಹಾರ ತಯಾರಿ ಮಾಡುವುದು ಸಮಸ್ಯೆ ಯಾಗುತ್ತಿದೆ.
ಇನ್ನು ಹಲವು ಕಡೆ ಹೆಚ್ ಟಿ ಲೈನ್ ತಾಗಿಕೊಂಡಿರುವ ಗಿಡ ಗಂಟಿಗಳ ತೆರವು ಸಂಪೂರ್ಣವಾಗಿಲ್ಲ, ಇತ್ತೀಚೆಗೆ ಬಂಗಾಡಿ ಫಿಚಾಲಾರು ಟಿಸಿ ಯಲ್ಲಿ ಹೈ ವೋಲ್ಟೇಜ್ ವಿದ್ಯುತ್ ಹರಿದು ಲಿಂಗಾಂತ್ಯಾರು ಜನಾರ್ಧನ ದೇವಾಡಿಗರ ಮನೆಯ ಟಿವಿ ಸಂಪೂರ್ಣ ಸುಟ್ಟು ಹೋಗಿ ಮನೆಯು ಅಪಾಯದಿಂದ ಪಾರಾಗಿದೆ. ನೆರೆಯ 2 ಮನೆಯ ಪ್ಯಾನ್ ಸುಟ್ಟು ಹೋಗಿವೆ. ಮಳೆಗಾಲದ ಮುಂಚೆ ತೆರವುಗೊಳಿಸಬೇಕಾದ ಮರ, ಗಿಡ ,ಗೆಲ್ಲುಗಳನ್ನು ಮಳೆಗಾಲದಲ್ಲಿ ತೆರವುಗೊಳಿಸಲು ಮಳೆ ಅಡ್ಡಿಯಾಗುತ್ತಿರುವ ಕಾರಣ ತಿಳಿಸುತ್ತಾರೆ.

ಇಲ್ಲಿ ಲೈನ್ ಮ್ಯಾನ್ ಸಿಂಬಂದಿಗಳ ಕೊರತೆಯು ಇದ್ದು .ಕೂಡಲೆ ಸಂಬಂಧ ಪಟ್ಟ ಆಧಿಕಾರಿಗಳು ವಿದ್ಯುತ್ ಸಮಸೈ ಯನ್ನು ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ

Related posts

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!