22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

ಮಡಂತ್ಯಾರು : ಹೈಸ್ಕೂಲ್ ರೀಯೂನಿಯನ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ “ಕ್ಷೀರಾಂಬುಧಿ” ಸಭಾಂಗಣದಲ್ಲಿ ನಡೆಯಿತು.

ಸಹಪಾಠಿಗಳೊಂದಿಗೆ ಶಾಲಾ ದಿನಗಳಲ್ಲಿ ವಿದ್ಯೆಯನ್ನ ಧಾರೆ ಎರೆದ ಗುರುಗಳಾದ ಜೆರಾಲ್ಡ್ ಮೊರಾಸ್ , ಹೆರಾಲ್ಡ್ ಡಿಸೋಜ , ಜೆರಾಲ್ಡ್ ಡಿಸೋಜ, ಶ್ರೀಮತಿ ಶಾಂತಿ ಮೇರಿ ಡಿಸೋಜ ಇವರುಗಳು ಅಗಲಿದ ಡೇವಿಡ್ ಡಿಸೋಜ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆರಾಲ್ಡ್ ಮೊರಾಸ್ ಹಾಗೂ ಹೆರಾಲ್ಡ್ ಡಿಸೋಜ ರವರು ಶಿಷ್ಯನ ಅಗಲಿಕೆಯ ನೋವಿನೊಂದಿಗೆ ಶಾಲಾ ಸಮಯಗಳಲ್ಲಿ ಶ್ರೀಯುತರು ಇದ್ದ ರೀತಿಯ ಅನುಭವ ಹಂಚಿಕೊಂಡರು.

ಸಂಸ್ಥೆಯ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆಯವರು ಮಾತನಾಡಿ ಗೆಳೆಯನ ಅಗಲುವಿಕೆಯಿಂದ ಸಮಾಜಕ್ಕೆ, ಕುಟುಂಬಕ್ಕೆ ಮಾತ್ರವಲ್ಲದೆ ಹೈಸ್ಕೂಲ್ ರೀಯೂನಿಯನ್ ತಂಡದ ಕೊಂಡಿ ಕಳಚಿದಂತಾಯಿತು. ಇಂತಹ ಸಂದರ್ಭದಲ್ಲಿ ಈ ನೋವನ್ನು ಬರಿಸುವ ಶಕ್ತಿಯನ್ನು ಆ ದೇವರು ಎಲ್ಲರಿಗೂ ಕರುಣಿಸಲೆಂದು ನುಡಿ ನಮನ ಸಲ್ಲಿಸಿದರು.
ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಮಾತನಾಡಿ ಗೆಳೆತನದ ಅನುಭವನ್ನು ಹಂಚಿಕೊಂಡರು. ಡೆಸ್ಮಂಡ್ ಜೋಯೆಲ್ ಕಾರ್ಯಕ್ರಮ ನಿರೂಪಿಸಿ, ಸಂಪತ್ ಕುಮಾರ್ ಧನ್ಯವಾದವಿತ್ತರು.
ಸಂತೋಷದ ಸಂದರ್ಭದಲ್ಲಿ ಮಾತ್ರ ಅಲ್ಲಾ ದುಃಖದ ಸಮಯದಲ್ಲೂ ಹೈಸ್ಕೂಲ್ ರೀ ಯೂನಿಯನ್ ಮಡಂತ್ಯಾರು ಸದಾ ಸ್ಪಂದಿಸುತ್ತದೆ ಎನ್ನುವುದನ್ನು ಎಲ್ಲಾ ಸಹಪಾಠಿಗಳು ಶ್ರದ್ಧಾಂಜಲಿ ಸಮರ್ಪಿಸುವ ಮುಖೇನ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿದಂತಾಗಿದೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya
error: Content is protected !!