September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

ಮಡಂತ್ಯಾರು : ಹೈಸ್ಕೂಲ್ ರೀಯೂನಿಯನ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ “ಕ್ಷೀರಾಂಬುಧಿ” ಸಭಾಂಗಣದಲ್ಲಿ ನಡೆಯಿತು.

ಸಹಪಾಠಿಗಳೊಂದಿಗೆ ಶಾಲಾ ದಿನಗಳಲ್ಲಿ ವಿದ್ಯೆಯನ್ನ ಧಾರೆ ಎರೆದ ಗುರುಗಳಾದ ಜೆರಾಲ್ಡ್ ಮೊರಾಸ್ , ಹೆರಾಲ್ಡ್ ಡಿಸೋಜ , ಜೆರಾಲ್ಡ್ ಡಿಸೋಜ, ಶ್ರೀಮತಿ ಶಾಂತಿ ಮೇರಿ ಡಿಸೋಜ ಇವರುಗಳು ಅಗಲಿದ ಡೇವಿಡ್ ಡಿಸೋಜ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆರಾಲ್ಡ್ ಮೊರಾಸ್ ಹಾಗೂ ಹೆರಾಲ್ಡ್ ಡಿಸೋಜ ರವರು ಶಿಷ್ಯನ ಅಗಲಿಕೆಯ ನೋವಿನೊಂದಿಗೆ ಶಾಲಾ ಸಮಯಗಳಲ್ಲಿ ಶ್ರೀಯುತರು ಇದ್ದ ರೀತಿಯ ಅನುಭವ ಹಂಚಿಕೊಂಡರು.

ಸಂಸ್ಥೆಯ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆಯವರು ಮಾತನಾಡಿ ಗೆಳೆಯನ ಅಗಲುವಿಕೆಯಿಂದ ಸಮಾಜಕ್ಕೆ, ಕುಟುಂಬಕ್ಕೆ ಮಾತ್ರವಲ್ಲದೆ ಹೈಸ್ಕೂಲ್ ರೀಯೂನಿಯನ್ ತಂಡದ ಕೊಂಡಿ ಕಳಚಿದಂತಾಯಿತು. ಇಂತಹ ಸಂದರ್ಭದಲ್ಲಿ ಈ ನೋವನ್ನು ಬರಿಸುವ ಶಕ್ತಿಯನ್ನು ಆ ದೇವರು ಎಲ್ಲರಿಗೂ ಕರುಣಿಸಲೆಂದು ನುಡಿ ನಮನ ಸಲ್ಲಿಸಿದರು.
ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಮಾತನಾಡಿ ಗೆಳೆತನದ ಅನುಭವನ್ನು ಹಂಚಿಕೊಂಡರು. ಡೆಸ್ಮಂಡ್ ಜೋಯೆಲ್ ಕಾರ್ಯಕ್ರಮ ನಿರೂಪಿಸಿ, ಸಂಪತ್ ಕುಮಾರ್ ಧನ್ಯವಾದವಿತ್ತರು.
ಸಂತೋಷದ ಸಂದರ್ಭದಲ್ಲಿ ಮಾತ್ರ ಅಲ್ಲಾ ದುಃಖದ ಸಮಯದಲ್ಲೂ ಹೈಸ್ಕೂಲ್ ರೀ ಯೂನಿಯನ್ ಮಡಂತ್ಯಾರು ಸದಾ ಸ್ಪಂದಿಸುತ್ತದೆ ಎನ್ನುವುದನ್ನು ಎಲ್ಲಾ ಸಹಪಾಠಿಗಳು ಶ್ರದ್ಧಾಂಜಲಿ ಸಮರ್ಪಿಸುವ ಮುಖೇನ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿದಂತಾಗಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!