25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

ಮಡಂತ್ಯಾರು : ಹೈಸ್ಕೂಲ್ ರೀಯೂನಿಯನ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ “ಕ್ಷೀರಾಂಬುಧಿ” ಸಭಾಂಗಣದಲ್ಲಿ ನಡೆಯಿತು.

ಸಹಪಾಠಿಗಳೊಂದಿಗೆ ಶಾಲಾ ದಿನಗಳಲ್ಲಿ ವಿದ್ಯೆಯನ್ನ ಧಾರೆ ಎರೆದ ಗುರುಗಳಾದ ಜೆರಾಲ್ಡ್ ಮೊರಾಸ್ , ಹೆರಾಲ್ಡ್ ಡಿಸೋಜ , ಜೆರಾಲ್ಡ್ ಡಿಸೋಜ, ಶ್ರೀಮತಿ ಶಾಂತಿ ಮೇರಿ ಡಿಸೋಜ ಇವರುಗಳು ಅಗಲಿದ ಡೇವಿಡ್ ಡಿಸೋಜ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆರಾಲ್ಡ್ ಮೊರಾಸ್ ಹಾಗೂ ಹೆರಾಲ್ಡ್ ಡಿಸೋಜ ರವರು ಶಿಷ್ಯನ ಅಗಲಿಕೆಯ ನೋವಿನೊಂದಿಗೆ ಶಾಲಾ ಸಮಯಗಳಲ್ಲಿ ಶ್ರೀಯುತರು ಇದ್ದ ರೀತಿಯ ಅನುಭವ ಹಂಚಿಕೊಂಡರು.

ಸಂಸ್ಥೆಯ ಅಧ್ಯಕ್ಷ ಅಶೋಕ್ ಗುಂಡಿಯಲ್ಕೆಯವರು ಮಾತನಾಡಿ ಗೆಳೆಯನ ಅಗಲುವಿಕೆಯಿಂದ ಸಮಾಜಕ್ಕೆ, ಕುಟುಂಬಕ್ಕೆ ಮಾತ್ರವಲ್ಲದೆ ಹೈಸ್ಕೂಲ್ ರೀಯೂನಿಯನ್ ತಂಡದ ಕೊಂಡಿ ಕಳಚಿದಂತಾಯಿತು. ಇಂತಹ ಸಂದರ್ಭದಲ್ಲಿ ಈ ನೋವನ್ನು ಬರಿಸುವ ಶಕ್ತಿಯನ್ನು ಆ ದೇವರು ಎಲ್ಲರಿಗೂ ಕರುಣಿಸಲೆಂದು ನುಡಿ ನಮನ ಸಲ್ಲಿಸಿದರು.
ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಮಾತನಾಡಿ ಗೆಳೆತನದ ಅನುಭವನ್ನು ಹಂಚಿಕೊಂಡರು. ಡೆಸ್ಮಂಡ್ ಜೋಯೆಲ್ ಕಾರ್ಯಕ್ರಮ ನಿರೂಪಿಸಿ, ಸಂಪತ್ ಕುಮಾರ್ ಧನ್ಯವಾದವಿತ್ತರು.
ಸಂತೋಷದ ಸಂದರ್ಭದಲ್ಲಿ ಮಾತ್ರ ಅಲ್ಲಾ ದುಃಖದ ಸಮಯದಲ್ಲೂ ಹೈಸ್ಕೂಲ್ ರೀ ಯೂನಿಯನ್ ಮಡಂತ್ಯಾರು ಸದಾ ಸ್ಪಂದಿಸುತ್ತದೆ ಎನ್ನುವುದನ್ನು ಎಲ್ಲಾ ಸಹಪಾಠಿಗಳು ಶ್ರದ್ಧಾಂಜಲಿ ಸಮರ್ಪಿಸುವ ಮುಖೇನ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಿದಂತಾಗಿದೆ.

Related posts

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya
error: Content is protected !!