24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ, ಮಂಗಳೂರು ವಿಭಾಗ ಮತ್ತು ಬಂಟ್ವಾಳ ವಲಯದ ಸಹಯೋಗದಲ್ಲಿ ಬಸದಿ ಸ್ವಚ್ಛತಾ ತಂಡವು ಕಾರಿಂಜದ ಕುಂಟರ ಪಲ್ಕೆ ಕೊಡ್ಯಾ ಮಲೆ ಎಂಬಲ್ಲಿ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ ಹಾಗೂ ಹಸಿರಿಗಾಗಿ ಮಾವು, ಹಲಸು, ಪೇರಳೆ, ಪುನರ್ಪುಳಿ, ಹುಣಸೆ ಹುಳಿ, ಕೊಕ್ಕೋ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಊರ ಪರಿಸರ ಪ್ರೇಮಿಗಳು ಕೈ ಜೋಡಿಸಿದರು.

ಇದೀಗ ಬಸದಿ ಸ್ವಚ್ಛತಾ ತಂಡದವರ ಮರ ಗಿಡಗಳನ್ನು ಬೆಳಿಸಿ ಪ್ರಾಣಿ ಪಕ್ಷಿ ಸಂಕುಲ ಉಳಿಸಿ, ಪ್ರಕೃತಿಯನ್ನು ಪ್ರೀತಿಸಿ ಎಂಬ ಧ್ಯೇಯದ ಪ್ರಾಮಾಣಿಕ ಕಾರ್ಯಕ್ಕೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

Related posts

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!