ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

ಬೆಳ್ತಂಗಡಿ : ಗೇರುಕಟ್ಟೆ, ನಾಳದ ಪರಿಸರದಲ್ಲಿ ಏರ್ ಟೆಲ್ ಕಂಪನಿಯ ನೆಟ್ವರ್ಕ್ ಸಮಸ್ಯೆಯಿಂದ ಸಾವಿರಾರು ಗ್ರಾಹಕರು ಕಂಗಲಾಗಿದ್ದಾರೆ.


ನಾಳದಲ್ಲಿ ಬಿ.ಎಸ್.ಎನ್.ಎಲ್. ಗೇರುಕಟ್ಟೆಯಲ್ಲಿ ಏರ್ ಟೆಲ್ ಟವರ್ ಗಳು ಜನರಿಗೆ ಲಭ್ಯವಿದ್ದರೂ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಗಾದೆ ಮಾತಿನಂತೆ ಆಗಿದೆ. ನಾಳದಲ್ಲಿ ಮತ್ತು ಗೇರುಕಟ್ಟೆಯ ಟವರ್ ಗಳಲ್ಲಿ ಬಿ.ಎಸ್.ಎನ್.ಎಲ್ ಟವರ್ ನಲ್ಲಿ ಏರ್ ಟೆಲ್ ಮತ್ತು ಇನ್ನೆರಡು ಕಂಪನಿಯವರು ಸೇರಿಸಿಕೊಂಡರೂ ಗ್ರಾಹಕರಿಗೆ ಪ್ರಯೋಜನವಿಲ್ಲ.


ಈಗಾಗಲೇ ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ, ಶಾಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸ ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ ಹಾಗೂ ಸರಕಾರದ ವಿವಿಧ ರೀತಿಯ ಸೌಲಭ್ಯಗಳನ್ನು ಪಡೆಯುವಲ್ಲಿ ಜನರು ವಂಚಿತರಾಗಿದ್ದರೆ.


ಈ ಹಿಂದೆ ಗೇರುಕಟ್ಟೆ ಏರ್ ಟೆಲ್ ಟವರ್ ಬುಡದಲ್ಲಿ ಬೆಂಕಿ ಹೊತ್ತಿಗೊಂಡ ಸಮಯದಲ್ಲಿ ಗ್ರಾಹಕರು ರಕ್ಷಿಸಿ ಮಾನವೀಯತೆ ಮೆರೆದರು. ಸಂಸ್ಥೆಯು ಗ್ರಾಹಕರ ಸಹಾಯಕ್ಕೆ ಬರದೆ ಸತಾಯಿಸುದನ್ನು ಗ್ರಾಮಸ್ಥರು ಸಹಿಸುವುದಿಲ್ಲ. ತಕ್ಷಣ ಸರಿಯಾದ ಕ್ರಮಕೈಗೊಳಬೇಕು. ತಪ್ಪಿದಲ್ಲಿ ಪಂಚಾಯತ್ ಮೇಲೆ ಒತ್ತಡ ಹೇರಿ ಪರವಾನಿಗೆ ರದ್ದು ಪಡಿಸುವ ಕಾರ್ಯಕ್ಕೆ ಮುಂದಾಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ವರದಿ: ಕೆ.ಎನ್ ಗೌಡ

Related posts

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya
error: Content is protected !!