23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

ಬೆಳ್ತಂಗಡಿ : ಗೇರುಕಟ್ಟೆ, ನಾಳದ ಪರಿಸರದಲ್ಲಿ ಏರ್ ಟೆಲ್ ಕಂಪನಿಯ ನೆಟ್ವರ್ಕ್ ಸಮಸ್ಯೆಯಿಂದ ಸಾವಿರಾರು ಗ್ರಾಹಕರು ಕಂಗಲಾಗಿದ್ದಾರೆ.


ನಾಳದಲ್ಲಿ ಬಿ.ಎಸ್.ಎನ್.ಎಲ್. ಗೇರುಕಟ್ಟೆಯಲ್ಲಿ ಏರ್ ಟೆಲ್ ಟವರ್ ಗಳು ಜನರಿಗೆ ಲಭ್ಯವಿದ್ದರೂ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ ಗಾದೆ ಮಾತಿನಂತೆ ಆಗಿದೆ. ನಾಳದಲ್ಲಿ ಮತ್ತು ಗೇರುಕಟ್ಟೆಯ ಟವರ್ ಗಳಲ್ಲಿ ಬಿ.ಎಸ್.ಎನ್.ಎಲ್ ಟವರ್ ನಲ್ಲಿ ಏರ್ ಟೆಲ್ ಮತ್ತು ಇನ್ನೆರಡು ಕಂಪನಿಯವರು ಸೇರಿಸಿಕೊಂಡರೂ ಗ್ರಾಹಕರಿಗೆ ಪ್ರಯೋಜನವಿಲ್ಲ.


ಈಗಾಗಲೇ ಕೃಷಿಕರಿಗೆ, ಕೂಲಿ ಕಾರ್ಮಿಕರಿಗೆ, ಶಾಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸ ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ ಹಾಗೂ ಸರಕಾರದ ವಿವಿಧ ರೀತಿಯ ಸೌಲಭ್ಯಗಳನ್ನು ಪಡೆಯುವಲ್ಲಿ ಜನರು ವಂಚಿತರಾಗಿದ್ದರೆ.


ಈ ಹಿಂದೆ ಗೇರುಕಟ್ಟೆ ಏರ್ ಟೆಲ್ ಟವರ್ ಬುಡದಲ್ಲಿ ಬೆಂಕಿ ಹೊತ್ತಿಗೊಂಡ ಸಮಯದಲ್ಲಿ ಗ್ರಾಹಕರು ರಕ್ಷಿಸಿ ಮಾನವೀಯತೆ ಮೆರೆದರು. ಸಂಸ್ಥೆಯು ಗ್ರಾಹಕರ ಸಹಾಯಕ್ಕೆ ಬರದೆ ಸತಾಯಿಸುದನ್ನು ಗ್ರಾಮಸ್ಥರು ಸಹಿಸುವುದಿಲ್ಲ. ತಕ್ಷಣ ಸರಿಯಾದ ಕ್ರಮಕೈಗೊಳಬೇಕು. ತಪ್ಪಿದಲ್ಲಿ ಪಂಚಾಯತ್ ಮೇಲೆ ಒತ್ತಡ ಹೇರಿ ಪರವಾನಿಗೆ ರದ್ದು ಪಡಿಸುವ ಕಾರ್ಯಕ್ಕೆ ಮುಂದಾಬೇಕಾಗುತ್ತದೆ ಎಂದು ಎಚ್ಚರಿಸುತ್ತಾರೆ.

ವರದಿ: ಕೆ.ಎನ್ ಗೌಡ

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!