25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

ಬೆದ್ರಬೆಟ್ಟು: ಸುಮಾರು 800 ವರ್ಷಗಳ ಇತಿಹಾಸವಿರುವ ರಾಜಮನೆತನದ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ಕ್ಷೇತ್ರ ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ ಕಾರ್ಯಕ್ರಮವು ಕ್ಷೇತ್ರದಲ್ಲಿ ಜು.7 ರಂದು ನಡೆಯಿತು.

ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ವಿಜ್ಞಾಪನಾ ಪತ್ರವನ್ನು ಕರ್ನಾಟಕ ರಾಜ್ಯ ಮಾಜಿ ಸಚಿವ ಗಂಗಾಧರ ಗೌಡ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೋದ್ ಕುಮಾರ್ ವಹಿಸಿದ್ದರು. ಚಂದ್ರಶೇಖರ್ ಸ್ವಸ್ತಿಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಮುಕುಂದ ಸುವರ್ಣ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಎಲ್ ಲಕ್ಷ್ಮಣ ಗೌಡ, ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ, ಕೊಲ್ಲಿ ದೇವಸ್ಥಾನದ ಕಾರ್ಯದರ್ಶಿ ದಾಸಪ್ಪ ಗೌಡ, ಊರಿನ ಹಿರಿಯರಾದ ಸುಂದರ ಗೌಡ, ಶೀನಪ್ಪ ಗೌಡ, ನೇತ್ರಾ ಕೊಡಂಗೆ, ಉದ್ಯಮಿ ಶ್ರೀಧರ್ ಗುಡಿಗಾ‌ರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಕ್ಷಿತಾ ಪ್ರಾರ್ಥಿಸಿ, ಚಂದ್ರಶೇಖರ್ ಗೌಡ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಅ.14-15: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಪ್ರದರ್ಶನ , ದೀಪಾವಳಿ ಬಿಗ್ ಸೇಲ್

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!