22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡುಕೋಡಿ ವೈನ್ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ ಘಟನೆ ನಡೆದಿದೆ.

ನಿಟ್ಟಡೆ ಗ್ರಾಮದ ನಿವಾಸಿ ಪ್ರಸಾದ ಯಾನೆ ಬಾಡು ಪ್ರಸಾದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತಾನು ಮೋಹನ್ ಎಂಬವರೊಂದಿಗೆ ಮೂಡುಕೋಡಿ ಗ್ರಾಮದ ವೈನ್ ಶಾಪಿಗೆ ಬಂದಿದ್ದ ವೇಳೆ ಆರೋಪಿಗಳಾದ ವಸಂತ ಕೋಟ್ಯಾನ್ ಹಾಗೂ ಸಂತೋಷ್ ನಾರ್ಲ ಎಂಬವರು ಪ್ರಸಾದ್ ನನ್ನು ತಡೆದು ನಿಲ್ಲಿಸಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ. ಹಲ್ಲೆಗೆ ಒಳಗಾದ ಪ್ರಸಾದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೂರು ನೀಡಿದ್ದು ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ಘಟನೆಗೆ ಸಂಬಂಧಿಸಿಸಿದಂತೆ ವಸಂತ ಕೋಟ್ಯಾನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತನ್ನ ಮೇಲೆ ಹಾಗೂ ಸಂತೋಷ್ ಎಂಬವರ ಮೇಲೆ ಪ್ರಸಾದ್ ಯಾನೆ ಬಾಡು ಪ್ರಸಾದ್ ಎಂಬಾತ ಅವಾಚ್ಯ ಶಬ್ದಗಳಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಜೂ.4: ವಿದ್ಯುತ್ ನಿಲುಗಡೆ

Suddi Udaya
error: Content is protected !!