23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಮೂಡುಕೋಡಿ ವೈನ್ ಶಾಪ್ ನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿದ ಘಟನೆ ನಡೆದಿದೆ.

ನಿಟ್ಟಡೆ ಗ್ರಾಮದ ನಿವಾಸಿ ಪ್ರಸಾದ ಯಾನೆ ಬಾಡು ಪ್ರಸಾದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತಾನು ಮೋಹನ್ ಎಂಬವರೊಂದಿಗೆ ಮೂಡುಕೋಡಿ ಗ್ರಾಮದ ವೈನ್ ಶಾಪಿಗೆ ಬಂದಿದ್ದ ವೇಳೆ ಆರೋಪಿಗಳಾದ ವಸಂತ ಕೋಟ್ಯಾನ್ ಹಾಗೂ ಸಂತೋಷ್ ನಾರ್ಲ ಎಂಬವರು ಪ್ರಸಾದ್ ನನ್ನು ತಡೆದು ನಿಲ್ಲಿಸಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾರೆ. ಹಲ್ಲೆಗೆ ಒಳಗಾದ ಪ್ರಸಾದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ದೂರು ನೀಡಿದ್ದು ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ಘಟನೆಗೆ ಸಂಬಂಧಿಸಿಸಿದಂತೆ ವಸಂತ ಕೋಟ್ಯಾನ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ತನ್ನ ಮೇಲೆ ಹಾಗೂ ಸಂತೋಷ್ ಎಂಬವರ ಮೇಲೆ ಪ್ರಸಾದ್ ಯಾನೆ ಬಾಡು ಪ್ರಸಾದ್ ಎಂಬಾತ ಅವಾಚ್ಯ ಶಬ್ದಗಳಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದು ಅದರಂತೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya
error: Content is protected !!