25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

ಕಳೆಂಜ: ಇಲ್ಲಿಯ ಶಿಬರಾಜೆ ನಿಂತಿಕಲ್ಲು ನಿವಾಸಿ ರಾಮಣ್ಣ (ದಿನೇಶ್ ನಾಯ್ಕ) ರ ಸೋಗೆ ಮನೆ ಚಾವಣಿಯು ಜೂ.29 ರಂದು ರಾತ್ರಿ ಸುರಿದ ಜಡಿಮಳೆಗೆ ಸಂಪೂರ್ಣ ಛಾವಣಿ ಕುಸಿದಿದ್ದು ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ಅವರಿಗೆ ತಾತ್ಕಾಲಿಕ ಮನೆಯನ್ನು ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ್ ವಳಗುಡ್ಡೆಯವರು ದಾನಿಗಳನ್ನು ಸಂಪರ್ಕಿಸಿದರು. ಅಂತೆಯೇ ವಿಶ್ವಹಿಂದೂ ಪರಿಷತ್ ಭಜರಂಗದಳ ಕಳೆಂಜದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರು, ಊರ ದಾನಿಗಳ ಸಹಕಾರ ದೊರೆಯಿತು. ಸಂಪೂರ್ಣ ಶೀಟಿನ ಆರ್ಥಿಕ ನೆರವನ್ನು ನೀಡಿದ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮುಂದಾಳತ್ವದಲ್ಲಿ ಈ ತಾತ್ಕಾಲಿಕ ಶೀಟಿನ ಮಾಡಿನ ಮನೆ ನಿರ್ಮಾಣವಾಯಿತು.


ಈ ವೇಳೆ ದಯಾನಂದ ನಾಯ್ಕ, ಸುಂದರ ಗೌಡ ಪಳ್ಳದಮೂಲೆ, ಪ್ರವೀಣ್ ಬಟ್ಯಾಲು, ಧನಂಜಯ ಗೌಡ ವಳಚ್ಚಿಲು, ಶೇಖರ ಗೌಡ ನೆಕ್ಕರಾಜೆ, ದಿನೇಶ ಸೀಂಬೂಲು, ಎನ್.ಕೆ ಚಾಕೋ ಗುಂಡಿಗದ್ದೆ, ಗಂಗಾಧರ ಗೌಡ ಪಲ್ಲದಮೂಲೆ, ಸುಂದರ ಗೌಡ ಪಲ್ಲದಮೂಲೆ, ಮಾಧವ ಗೌಡ ಪಲ್ಲದಮೂಲೆ, ಸಂತೋಷ್ ಕುಮಾರ್ ಜೈನ್ ವಳಂಬಲ, ರತ್ನಾಕರ ಗೌಡ ಗುತ್ತು, ಕಾರ್ತಿಕ್ ಗೌಡ ಮಾಪಾಲ್ತಿಮಾರು, ಹರೀಶ್ ಕುಮಾರ್ ವಳಗುಡ್ಡೆ ಮುಂತಾದ ದಾನಿಗಳು ತಾತ್ಕಾಲಿಕ ಮನೆ ನಿರ್ಮಿಸುವಲ್ಲಿ ಸಹಕರಿಸಿದರು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya
error: Content is protected !!