ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

ಕಳೆಂಜ: ಇಲ್ಲಿಯ ಶಿಬರಾಜೆ ನಿಂತಿಕಲ್ಲು ನಿವಾಸಿ ರಾಮಣ್ಣ (ದಿನೇಶ್ ನಾಯ್ಕ) ರ ಸೋಗೆ ಮನೆ ಚಾವಣಿಯು ಜೂ.29 ರಂದು ರಾತ್ರಿ ಸುರಿದ ಜಡಿಮಳೆಗೆ ಸಂಪೂರ್ಣ ಛಾವಣಿ ಕುಸಿದಿದ್ದು ಅತಂತ್ರರಾದ ರಾಮಣ್ಣರವರ ಕುಟುಂಬದವರಿಗೆ ಪಕ್ಕದ ಮನೆಯ ಅನೂಪ್ ನಾಯ್ಕ ದೇರ್ಯ ಆಶ್ರಯ ನೀಡಿದ್ದರು. ಅವರಿಗೆ ತಾತ್ಕಾಲಿಕ ಮನೆಯನ್ನು ನಿರ್ಮಿಸಿ ಕೊಡಬೇಕೆಂದು ಪಣತೊಟ್ಟ ಹರೀಶ್ ವಳಗುಡ್ಡೆಯವರು ದಾನಿಗಳನ್ನು ಸಂಪರ್ಕಿಸಿದರು. ಅಂತೆಯೇ ವಿಶ್ವಹಿಂದೂ ಪರಿಷತ್ ಭಜರಂಗದಳ ಕಳೆಂಜದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರು, ಊರ ದಾನಿಗಳ ಸಹಕಾರ ದೊರೆಯಿತು. ಸಂಪೂರ್ಣ ಶೀಟಿನ ಆರ್ಥಿಕ ನೆರವನ್ನು ನೀಡಿದ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮುಂದಾಳತ್ವದಲ್ಲಿ ಈ ತಾತ್ಕಾಲಿಕ ಶೀಟಿನ ಮಾಡಿನ ಮನೆ ನಿರ್ಮಾಣವಾಯಿತು.


ಈ ವೇಳೆ ದಯಾನಂದ ನಾಯ್ಕ, ಸುಂದರ ಗೌಡ ಪಳ್ಳದಮೂಲೆ, ಪ್ರವೀಣ್ ಬಟ್ಯಾಲು, ಧನಂಜಯ ಗೌಡ ವಳಚ್ಚಿಲು, ಶೇಖರ ಗೌಡ ನೆಕ್ಕರಾಜೆ, ದಿನೇಶ ಸೀಂಬೂಲು, ಎನ್.ಕೆ ಚಾಕೋ ಗುಂಡಿಗದ್ದೆ, ಗಂಗಾಧರ ಗೌಡ ಪಲ್ಲದಮೂಲೆ, ಸುಂದರ ಗೌಡ ಪಲ್ಲದಮೂಲೆ, ಮಾಧವ ಗೌಡ ಪಲ್ಲದಮೂಲೆ, ಸಂತೋಷ್ ಕುಮಾರ್ ಜೈನ್ ವಳಂಬಲ, ರತ್ನಾಕರ ಗೌಡ ಗುತ್ತು, ಕಾರ್ತಿಕ್ ಗೌಡ ಮಾಪಾಲ್ತಿಮಾರು, ಹರೀಶ್ ಕುಮಾರ್ ವಳಗುಡ್ಡೆ ಮುಂತಾದ ದಾನಿಗಳು ತಾತ್ಕಾಲಿಕ ಮನೆ ನಿರ್ಮಿಸುವಲ್ಲಿ ಸಹಕರಿಸಿದರು.

Related posts

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
error: Content is protected !!