September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

ನಡ: “ನಮ್ಮ ತಪ್ಪುಗಳಿಗೆ, ನಮ್ಮ ಸೋಲುಗಳಿಗೆ ನಾವೇ ಕಾರಣರಾಗುತ್ತೇವೆ. ಸಾಧನೆಗೆ ಬಡತನ ಎಂದೂ ಅಡ್ಡಿಯಾಗಲಾರದು. ಸ್ವಪ್ರಯತ್ನವನ್ನು ಬಿಡಬಾರದು. ಅದೃಷ್ಟವನ್ನೇ ನಂಬಿ ಕೂರಬಾರದು. ಒಳ್ಳೆಯ ಆಲೋಚನೆಯಿಂದ ಕಾರ್ಯ ಮಾಡಿದಾಗ ಒಳ್ಳೆಯ ಪ್ರತಿಫಲವೇ ಸಿಗುತ್ತದೆ” ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಗಣೇಶ್ ಭಟ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಅವರು ಸಭಾಧ್ಯಕ್ಷತೆಯನ್ನು ವಹಿಸಿದ್ದು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ವೇದಿಕೆಯಲ್ಲಿ ಮುಖ್ಯ ಅಭ್ಯಾಗತರಾಗಿ ನಡ ಗ್ರಾಮ ಪಂಚಾಯತ್ ನ ಪ್ರಥಮ ಪ್ರಜೆ ಶ್ರೀಮತಿ ಮಂಜುಳಾ ದೇವಾಡಿಗ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ, ಕೊಯ್ಯೂರು ಸ. ಪ. ಪೂ. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಮೋಹನ ಗೌಡ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವಿದ್ಯಾರ್ಥಿನಿಯರು ಸುಶ್ರಾವ್ಯವಾಗಿ ಪರಿಸರಗೀತೆಯನ್ನು ಹಾಡಿದರು. ಪರಿಸರ ಸ್ಫರ್ಧೆಯ ಬಹುಮಾನವನ್ನು ರೇಂಜರ್ಸ್ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಕನ್ನಡ ಉಪನ್ಯಾಸಕರಾದ ಶ್ರೀಮತಿ ಲಿಲ್ಲಿ ಪಿ.ವಿ. ನಿರೂಪಿಸಿದ ಕಾರ್ಯಕ್ರಮದಲ್ಲಿ ಕಾಲೇಜಿನ ಚುನಾವಣಾ ಸಂಚಾಲಕರಾದ ರಾಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಡಿ. ಪ್ರಸ್ತಾವನೆಗೈದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಸುಕೇತ ವಂದಿಸಿದರು.

Related posts

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya
error: Content is protected !!