22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

ಬೆಳ್ತಂಗಡಿ: ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದ್ದು, ನಿರ್ದೇಶಕರು, ಸದಸ್ಯರುಗಳ ಆಯ್ಕೆಗೆ ರಾಜ್ಯಮಟ್ಟದಲ್ಲಿ ಸಮಿತಿಯನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯ ಈ ರಾಜ್ಯ ಸಮಿತಿಯ ಸದಸ್ಯರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕರಾದ ಕೆ. ಹರೀಶ್ ಕುಮಾರ್ ಅವರು ನೇಮಕಗೊಂಡಿದ್ದಾರೆ.


ಸಮಿತಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷರಾಗಿದ್ದಾರೆ. ಉಳಿದಂತೆ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ ಜಾರ್ಜ್, ಸತೀಶ್ ಜಾರಕಿಹೋಳಿ, ಸಂತೋಷ್ ಎಸ್.ಲಾಡ್, ಡಾ.ಶರಣಪ್ರಕಾಶ್ ರುದ್ರಪ್ಪಪಾಟೀಲ್, ರಾಜ್ಯ ಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ವಿಧಾನ ಸಭಾ ಸದಸ್ಯರಾದ ಡಾ.ರೂಪಕಲಾ ಎಂ ಹಾಗೂ ವಿ.ಆರ್ ಸುದರ್ಶನ್ ಇದ್ದಾರೆ.

Related posts

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya
error: Content is protected !!