April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

ಉಜಿರೆ : ಜಗತ್ತು ಎಷ್ಟು ಸುಂದರವೊ ಅಷ್ಟೇ ಕೆಟ್ಟದಾಗಿದೆ, ವಿದ್ಯಾರ್ಥಿಗಳ ಮನಸ್ಸನ್ನು ಕೆಡಿಸುವ ಎಲ್ಲಾ ವ್ಯವಸ್ಥೆಗಳು ಸುತ್ತ ಮುತ್ತ ಇದ್ದು ನಾವು ಜಾಗೃತ ಮನಸ್ಥಿತಿ ಬೆಳೆಸಿಕೊಂಡರೆ ನಮ್ಮ ಭವಿಷ್ಯ, ಕಲಿಕೆ, ಸಾಧನೆ ಮುನ್ನಡೆಸಬಹುದು. ಪಿಯುಸಿ ಹಂತದಲ್ಲಿ ಮೌಲ್ಯಗಳನ್ನು ಬೆಳೆಸಿಕೊಂಡರೆ ಮುಂದಿನ ಕಾಲಘಟ್ಟ ಸುಗಮಗೊಳಿಸಬಹುದು.


ಶಿಕ್ಷಣ ಕ್ಷೇತ್ರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸ್ಪರ್ಧೆಗಳಿಗೆ ನಾವು ಹೊಂದಿಕೊಳ್ಳಲು ನಿತ್ಯ ಅಭ್ಯಾಸ ನಿರತತೆ ಬೇಕೇ ಬೇಕು.
ಸಂಸ್ಥೆ ಹಳೆ ವಿದ್ಯಾರ್ಥಿಯಾಗಿ ನಮ್ಮನ್ನು ಬೆಳೆಸಿದ ರೀತಿಗೆ ನಾವು ಈ ಮಟ್ಟಕ್ಕೇರಲು ಸಾಧ್ಯವಾಗಿದೆ, ಕಲಿಕೆ ಜೊತೆಗೆ ಮೌಲ್ಯ ಶಿಕ್ಷಣ, ನೈತಿಕತೆ, ಕ್ರೀಡೆ, ಸಾಂಸ್ಕೃತಿಕ, ಧಾರ್ಮಿಕ ಎಲ್ಲವೂ ಇಲ್ಲಿ ನಿರಂತರವಾಗಿ ಸಿಕ್ಕಿದ ಕಾರಣ ಭವಿಷ್ಯ ಕಟ್ಟಲು ಅನುಕೂಲಕರವೆಂದು ಸಂಸ್ಥೆ ಹಳೆ ವಿದ್ಯಾರ್ಥಿ ಹಾಗೂ ಮಂಗಳೂರು ಕೆ.ಎಂ. ಸಿ ಯಲ್ಲಿ ಕಾರ್ಡಿಯಾಲಾಜಿಸ್ಟ್ ಆಗಿರುವ ಡಾ. ವಿಕ್ರಂ ಶಾನುಭಾಗ್ ಹೇಳಿದರು.
ಕಾಲೇಜಿನ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನೊರ್ವ ಅತಿಥಿಯಾಗಿ ಆಗಮಿಸಿದ್ದ ಎಸ್.ಡಿ. ಎಂ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾಗಿರುವ ಧನ್ಯಕುಮಾರ್ ಅವರು ನಾಯಕನ ಗುಣಲಕ್ಷಣಗಳು ಹೇಗಿರಬೇಕು, ನಾಯಕತ್ವ ಅಧಿಕಾರವಲ್ಲ, ಅದೊಂದು ಜವಾಬ್ದಾರಿ, ದೂರದರ್ಶಿ ಗುಣಗಳೊಂದಿಗೆ ಆಂತರಿಕ ಶಕ್ತಿ ಜಾಗ್ರತಗೊಳಿಸಿ ಕಾರ್ಯಾಸನ್ನದ್ದರಾಗಿ, ಮಕ್ಕಳು ಸಿಕ್ಕಿದನ್ನು ಹೆಕ್ಕಿ ತಿನ್ನುವ ಹಕ್ಕಿಗಳಾಗಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಪ್ರಮಾಣ ವಚನ ಬೋಧಿಸಿ, ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಅಬ್ಜಿತ್ ದಿನೇಶ್ ಕಾರ್ಯದರ್ಶಿಯಾಗಿ ಶ್ರೇಯಸ್ ಗೌಡ ಟಿ.ಏನ್ ಆಯ್ಕೆಯಾದರು.

ಕಾಲೇಜಿನ ಉಪಪ್ರಾಂಶುಪಾಲರಾದ ಮನೀಶ್ ಕುಮಾರ್, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಮಾರ್ಗದರ್ಶಕರಾದ ಲಕ್ಷ್ಮಣ್ ಜಿ. ಡಿ. ಸ್ವಾಗತಿಸಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!