23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘ (ರಿ)ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ ನಾರಾವಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯದರ್ಶಿ ದಯಾನಂದ ಸಂಜಯನಗರ ಸ್ವಾಗತಿಸಿ, ಸಂಘದ ಖರ್ಚು ವೆಚ್ಚವನ್ನು ಮಂಡಿಸಿದರು. ಸಂಘದ ಗೌರವಾಧ್ಯಕ್ಷರಾಗಿ ಗಿರಿರಾಜ್ ಬಾರಿತ್ತಾಯ, ಅಧ್ಯಕ್ಷರಾಗಿ ವಿನಯ್ ಹೆಗ್ಡೆ ನಾರಾವಿ ಮತ್ತು ಕಾರ್ಯದರ್ಶಿಯಾಗಿ ದಯಾನಂದ್ ಸಂಜಯನಗರ ಇವರನ್ನೂ ಮುಂದುವರಿಸುವುದೆಂದು ತೀರ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷರಾಗಿ ಗಣೇಶ್ ಕಾಣಾಲ್, ರಫೀಕ್ ಬಾಂಬಿಲ, ಕೋಶಾಧಿಕಾರಿಯಾಗಿ ಜಯಕುಮಾರ್ ಕಲ್ಲಗುಡ್ಡೆ , ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಧರ್ಮಸ್ಥಳ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಂಘದ ಸಲಹೆಗಾರರಾಗಿ ವಸಂತ್ ಮಜಲ್, ಮಂಜುನಾಥ್ ಕಾಮತ್, ಜನಾರ್ಧನ ಗೌಡ, ವಿಶ್ವನಾಥ್ ಲಾಯಿಲ, ರಾಜಪ್ರಕಾಶ್ ಪಡ್ಡಾಯಿ, ಕಾರ್ಯಕಾರಿಣಿ ಸದಸ್ಯರಾಗಿ ನವಾಝ್ , ಅಧಿಷ್ ಕಾಮತ್,ರಾಘವೇಂದ್ರ, ಮನೋಜ್, ದಿಶಾಂತ್ ಮಿತ್ತಮಾರ್, ಸುಜಿತ್ ಚಂದ್ರಪಾಲ್, ಗಣೇಶ್ ಲಾಯಿಲ, ಧನಂಜಯ್ ರಾವ್, ನಝೀರ್ ಶಕ್ತಿನಗರ, ರವಿ ಗುಂಪಲಾಜೆ, ಸಹದೇವ್ ಉಜಿರೆ ಆಯ್ಕೆಯಾದರು. ಸಭೆಯಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ ಇವರಿಗೆ ನುಡಿನಮನ ಸಲ್ಲಿಸಲಾಯಿತು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!