23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘ (ರಿ)ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ವಿನಯ್ ಹೆಗ್ಡೆ ನಾರಾವಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯದರ್ಶಿ ದಯಾನಂದ ಸಂಜಯನಗರ ಸ್ವಾಗತಿಸಿ, ಸಂಘದ ಖರ್ಚು ವೆಚ್ಚವನ್ನು ಮಂಡಿಸಿದರು. ಸಂಘದ ಗೌರವಾಧ್ಯಕ್ಷರಾಗಿ ಗಿರಿರಾಜ್ ಬಾರಿತ್ತಾಯ, ಅಧ್ಯಕ್ಷರಾಗಿ ವಿನಯ್ ಹೆಗ್ಡೆ ನಾರಾವಿ ಮತ್ತು ಕಾರ್ಯದರ್ಶಿಯಾಗಿ ದಯಾನಂದ್ ಸಂಜಯನಗರ ಇವರನ್ನೂ ಮುಂದುವರಿಸುವುದೆಂದು ತೀರ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷರಾಗಿ ಗಣೇಶ್ ಕಾಣಾಲ್, ರಫೀಕ್ ಬಾಂಬಿಲ, ಕೋಶಾಧಿಕಾರಿಯಾಗಿ ಜಯಕುಮಾರ್ ಕಲ್ಲಗುಡ್ಡೆ , ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಧರ್ಮಸ್ಥಳ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಂಘದ ಸಲಹೆಗಾರರಾಗಿ ವಸಂತ್ ಮಜಲ್, ಮಂಜುನಾಥ್ ಕಾಮತ್, ಜನಾರ್ಧನ ಗೌಡ, ವಿಶ್ವನಾಥ್ ಲಾಯಿಲ, ರಾಜಪ್ರಕಾಶ್ ಪಡ್ಡಾಯಿ, ಕಾರ್ಯಕಾರಿಣಿ ಸದಸ್ಯರಾಗಿ ನವಾಝ್ , ಅಧಿಷ್ ಕಾಮತ್,ರಾಘವೇಂದ್ರ, ಮನೋಜ್, ದಿಶಾಂತ್ ಮಿತ್ತಮಾರ್, ಸುಜಿತ್ ಚಂದ್ರಪಾಲ್, ಗಣೇಶ್ ಲಾಯಿಲ, ಧನಂಜಯ್ ರಾವ್, ನಝೀರ್ ಶಕ್ತಿನಗರ, ರವಿ ಗುಂಪಲಾಜೆ, ಸಹದೇವ್ ಉಜಿರೆ ಆಯ್ಕೆಯಾದರು. ಸಭೆಯಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ ಇವರಿಗೆ ನುಡಿನಮನ ಸಲ್ಲಿಸಲಾಯಿತು.

Related posts

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!