ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ : ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವು ಜು.10 ರಂದು ಬೆಳ್ತಂಗಡಿ ಎಸ್‌ಡಿಎಂ ಕಲಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಪು ಉದಯವಾಣಿ ವರದಿಗಾರ ರಾಕೇಶ್ ಕುಂಜೂರ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆ ಅಧ್ಯಕ್ಷ .ಪಿ. ಕುಶಾಲಪ್ಪ ಗೌಡ ವಹಿಸಿದರು.

ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಕೀಲರು ಗಣೇಶ್ ಗೌಡ, ವಾಣಿ ಪಿಯು ಕಾಲೇಜು ಪ್ರಿನ್ಸಿಪಾಲ್ ಯದುಪತಿ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಶಿಕ್ಷಕಿ ಅನುರಾಧ ಉಪಸ್ಥಿತರಿದ್ದರು.

ಅಧ್ಯಕ್ಷ ಸಾಥ್ವಿಕ್, ಉಪಾಧ್ಯಕ್ಷ ಆದಿತ್ಯ , ಕಾರ್ಯದರ್ಶಿ ಸಮ್ನ್ವೀತ್ ಕುಮಾರ್ ಎನ್ ಭಂಡಾರಿ, ಜಂಟಿ ಕಾರ್ಯದರ್ಶಿ ಸುದರ್ಶನ್, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ರಿತಿಶಾ ಮತ್ತು ತೇಜಸ್, ಕ್ರೀಡಾ ಕಾರ್ಯದರ್ಶಿಗಳಾದ ಅಭಿನವ್ ವಿ ಕೆ ಮತ್ತು ನವೀನ್ ಪಿಂಟೋ, ಮಹಿಳಾ ಕಲ್ಯಾಣ ಕಾರ್ಯದರ್ಶಿಗಳಾದ ಶಿವಾನಿ ಎಸ್.ಜೆ. , ಸಾಹಿತಿ ಕುಶಾಲ್ , ಶಿಕ್ಷಕರು. ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಿಕ್ಷಕ ಬೆಳಿಯಪ್ಪ ಪದಗ್ರಹಣ ನೆರವೇರಿಸಿದರು. ಶಾಲಾ ಶಿಕ್ಷಕ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.ಉಪ ಪ್ರಾಂಶುಪಾಲರು ವಿಷ್ಣು ಪ್ರಕಾಶ್ ಧನ್ಯವಾದವಿತ್ತರು.

Leave a Comment

error: Content is protected !!