March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

ಬೆಳ್ತಂಗಡಿ :ಕಳಿಯ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋವಿಂದೂರು ಮತ್ತು ಯಂತ್ರಡ್ಕ ಸಮೀಪದ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ಸೃಷ್ಟಿಯಾಗಿದೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತಿರುವ ಗುಂಡಿ ಗಮನಕ್ಕೆ ಬಾರದೆ ಸುಮಾರು 10 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಜೊತೆಯಲ್ಲಿದ್ದ ಮಹಿಳೆಯರು, ಮಕ್ಕಳು ರಸ್ತೆಗೆ ಅಪ್ಪಳಿಸಿ ಕೈ-ಕಾಲು – ತಲೆಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಅವರಿಗೆ ಸಹಾಯ ಮಾಡಿದ ಬಗ್ಗೆ ರಸ್ತೆ ಪಕ್ಕದ ಮನೆಯವರು ಬೇಸರ ವ್ಯಕ್ತಪಡಿಸಿದರು.


ರಸ್ತೆ ಗುಂಡಿಗೆ ಬಿದ್ದು ದೊಡ್ಡ ಅನಾಹುತ ಆಗುವುದನ್ನೇ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಯುತ್ತಾರೆ ಸಂಬಂಧಿಸಿದ ಇಲಾಖೆಯವರು ಎಂದು ಬೇಸರದಿಂದ ನೀಡಿದರು.
ವಿವಿಧ ಇಲಾಖೆಯ ನೂರಾರು ಸರಕಾರಿ ನೌಕರರು, ಉನ್ನತ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇದೇ ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕೊಂಡು ಪ್ರಯಾಣ ಮಾಡುತ್ತಾರೆ. ಅದರೂ ಕಿಂಚಿತ್ತೂ ಗಮನಹರಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಥಳೀಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು.


ತಕ್ಷಣ ರಸ್ತೆ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವರದಿ : ಕೆ.ಎನ್ ಗೌಡ

Related posts

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!